ದೇಶ
ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮಧ್ಯ ಪ್ರದೇಶ ಮಾಜಿ ಸಿಎಂ ಕೈಲಾಶ್ ಜೋಶಿ ಪುತ್ರ ದೀಪಕ್ ಮುಂದು
ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಕೈಲಾಶ್ ಚಂದ್ರ ಜೋಶಿ ಅವರ ಪುತ್ರ ದೀಪಕ್ ಜೋಶಿ ಅವರು ಬಿಜೆಪಿ ತೊರೆಯಲು ಸಿದ್ಧರಾಗಿದ್ದು, ಮೇ 6 ಅಥವಾ ನಂತರ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ.
ಭೋಪಾಲ್: ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಕೈಲಾಶ್ ಚಂದ್ರ ಜೋಶಿ ಅವರ ಪುತ್ರ ದೀಪಕ್ ಜೋಶಿ ಅವರು ಬಿಜೆಪಿ ತೊರೆಯಲು ಸಿದ್ಧರಾಗಿದ್ದು, ಮೇ 6 ಅಥವಾ ನಂತರ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ.
ಈ ವರ್ಷದ ಕೊನೆಯಲ್ಲಿ ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದ್ದು, ಚುನಾವಣೆಗೂ ಮುನ್ನ,
ಮಾಜಿ ಸಂಸದ ದೀಪಕ್ ಅವರು ಕೈಹಿಡಿಯುವ ಸಾಧ್ಯತೆ ಇದೆ.
2018ರ ಚುನಾವಣೆಯಲ್ಲಿ ದೇವಾಸ್ ಜಿಲ್ಲೆಯ ಹತ್ಪಿಪ್ಲಿಯಾ ಕ್ಷೇತ್ರದಿಂದ ಸೋತ ನಂತರ ಬಿಜೆಪಿಯಲ್ಲಿ ಸೈಡ್ ಲೈನ್ ಆಗಿದ್ದರು. ಸದ್ಯ ರಾಜ್ಯ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದು, ಶೀಘ್ರದಲ್ಲೇ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ತಾವು ಕಾಂಗ್ರೆಸ್ ಸೇರುವುದನ್ನು ಖಚಿತಪಡಿಸಿದ ದೀಪಕ್ ಜೋಶಿ ಅವರು, ಈ ವರ್ಷಾಂತ್ಯದಲ್ಲಿ ನಡೆಯುವ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲಿದೆಯೇ ಎಂದು ನೋಡಲು ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶದವರೆಗೆ ಕಾಯಲು ಬಯಸುತ್ತೇನೆ ಎಂದಿದ್ದಾರೆ.