ನನ್ನಂತೆಯೇ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು: ಉದ್ಧವ್ ಠಾಕ್ರೆ

ನನ್ನಂತೆಯೇ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಗುರುವಾರ ಹೇಳಿದ್ದಾರೆ.
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ

ನವದೆಹಲಿ: ನನ್ನಂತೆಯೇ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಗುರುವಾರ ಹೇಳಿದ್ದಾರೆ.

ಮಹಾರಾಷ್ಟ್ರ ಮೂಲ ಶಿವಸೇನೆಯಿಂದ ಬಂಡಾಯವೆದ್ದು ಏಕನಾಥ ಶಿಂಧೆ ಹಿಂದೆ ಹೋಗಿದ್ದ 16 ಮಂದಿ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಕೋರಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

ತೀರ್ಪು ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆಗೂಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉದ್ಧವ್ ಠಾಕ್ರೆಯವರು ಪ್ರಜಾಪ್ರಭುತ್ವವನ್ನು ಹತ್ಯೆ ಮಾಡಿ ಏಕನಾಥ್ ಶಿಂಧೆಯವರು ಗೆದ್ದಿದ್ದಾರೆ. ನನ್ನಂತೆಯೇ ಏಕನಾಥ್ ಶಿಂಧೆ ಕೂಡ ರಾಜೀನಾಮೆ ನೀಡಬೇಕು ಎಂದು ಹೇಳಿದರು.

ಕಳೆದ ವರ್ಷ ಜೂನ್ ತಿಂಗಳಿನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ಈ ರಾಜೀನಾಮೆ ಕಾನೂನು ರೀತಿಯಾಗಿ ತಪ್ಪಾಗಿರಬಹುದು. ಆದರೆ, ನೈತಿಕ ಆಧಾರದ ಮೇಲೆ ನಾನು ರಾಜೀನಾಮೆ ನೀಡಿದ್ದೆ ಎಂದು ತಿಳಿಸಿದರು.

ಶಿಂಧೆ ಬಣದ ಶಾಸಕರು ನನ್ನ ಪಕ್ಷಕ್ಕೆ ಮತ್ತು ನನ್ನ ತಂದೆ (ಬಾಳ ಠಾಕ್ರೆ) ಪರಂಪರೆಗೆ ದ್ರೋಹ ಮಾಡಿದ್ದಾರೆ. ನನ್ನಂತೆಯೇ ಅವರೂ ರಾಜೀನಾಮೆ ನೀಡಬೇಕು ಎಂದರು.

ಬಳಿಕ ಮಾತನಾಡಿದ ನಿತೀಶ್ ಕುಮಾರ್ ಅವರು, ಮಹಾರಾಷ್ಟ್ರದ ಹಾಲಿ ಸಿಎಂ ಮತ್ತು ಉಪ ಮುಖ್ಯಮಂತ್ರಿಗೆ ನೈತಿಕತೆ ಇದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಇದೇ ವೇಳೆ, ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವವರು ದೇಶಕ್ಕಾಗಿ ಕೆಲಸ ಮಾಡುತ್ತಿಲ್ಲ...ಹೀಗಾಗಿ ದೇಶದ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ಕೆಲಸ ಮಾಡಲು ಒಗ್ಗೂಡಬೇಕಾಗಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com