ಅದಾನಿ-ಹಿಂಡೆನ್‌ಬರ್ಗ್ ವಿವಾದ: ತನಿಖೆ ಪೂರ್ಣಗೊಳಿಸಲು ಹೆಚ್ಚುವರಿಯಾಗಿ 6 ತಿಂಗಳ ಕಾಲಾವಕಾಶ ನೀಡಲು 'ಸುಪ್ರೀಂ' ನಕಾರ

ಅದಾನಿ-ಹಿಂಡೆನ್‌ಬರ್ಗ್ ಪ್ರಕರಣದ ತನಿಖೆ ನಡೆಸಲು ಭಾರತೀಯ ಷೇರು ಮತ್ತು ವಿನಿಮಯ ಮಂಡಳಿಗೆ (ಸೆಬಿ) ಸುಪ್ರೀಂ ಕೋರ್ಟ್ ಇನ್ನು 6 ತಿಂಗಳ ಕಾಲಾವಕಾಶ ನೀಡಲು ನಿರಾಕರಿಸಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ಅದಾನಿ-ಹಿಂಡೆನ್‌ಬರ್ಗ್ ಪ್ರಕರಣದ ತನಿಖೆ ನಡೆಸಲು ಭಾರತೀಯ ಷೇರು ಮತ್ತು ವಿನಿಮಯ ಮಂಡಳಿಗೆ (ಸೆಬಿ) ಸುಪ್ರೀಂ ಕೋರ್ಟ್ ಇನ್ನು 6 ತಿಂಗಳ ಕಾಲಾವಕಾಶ ನೀಡಲು ನಿರಾಕರಿಸಿದೆ.

ಅದಾನಿ ಗ್ರೂಪ್‌ನಿಂದ ಷೇರು ಬೆಲೆಗಳ ಕುಶಲತೆ ಮತ್ತು ನಿಯಂತ್ರಕ ಬಹಿರಂಗಪಡಿಸುವಿಕೆಯಲ್ಲಿನ ಲೋಪಗಳ ಆರೋಪಗಳ ತನಿಖೆಯನ್ನು ಪೂರ್ಣಗೊಳಿಸಲು ಸೆಬಿಗೆ ಇನ್ನೂ ಮೂರು ತಿಂಗಳ ಕಾಲಾವಕಾಶವನ್ನು ನ್ಯಾಯಾಲಯ ಪರಿಗಣಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದರೊಂದಿಗೆ ಸುಪ್ರೀಂ ಕೋರ್ಟ್ ವಿವಿಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳು ಮತ್ತು ಮಾರುಕಟ್ಟೆ ನಿಯಂತ್ರಕರ ಅರ್ಜಿಯನ್ನು ಮೇ 15ರಂದು ವಿಚಾರಣೆಗೆ ಪಟ್ಟಿ ಮಾಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಪಿ ಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ಈ ವಿಷಯ ಮತ್ತು ಸತ್ಯಗಳ ಕುರಿತು ಸುಪ್ರೀಂ ಕೋರ್ಟ್ ನೇಮಿಸಿದ ನ್ಯಾಯಮೂರ್ತಿ (ನಿವೃತ್ತ) ಎಎಂ ಸಪ್ರೆ ಸಮಿತಿಯ ವರದಿಯನ್ನು ನ್ಯಾಯಾಲಯದ ರಿಜಿಸ್ಟ್ರಿ ಸ್ವೀಕರಿಸಿದೆ ಎಂದು ಗಮನಿಸಿದೆ. ಈ ಮಧ್ಯೆ ನಾವು ವರದಿಯನ್ನು ಪರಿಶೀಲಿಸಬೇಕು ಎಂದು ಪೀಠ ಹೇಳಿದೆ. ಮೇ 15ರಂದು ಪ್ರಕರಣದ ವಿಚಾರಣೆ ನಡೆಸಲಿದ್ದೇವೆ.

ವಿಚಾರಣೆಯ ಸಂದರ್ಭದಲ್ಲಿ, ಭಾರತ ಭದ್ರತಾ ಮತ್ತು ವಿನಿಮಯ ಮಂಡಳಿ(ಸೆಬಿ) ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಪೀಠವು, ತನಿಖೆಯನ್ನು ಪೂರ್ಣಗೊಳಿಸಲು ಮಾರುಕಟ್ಟೆ ನಿಯಂತ್ರಕರಿಗೆ ಆರು ತಿಂಗಳ ಬದಲಿಗೆ ಮೂರು ತಿಂಗಳ ಕಾಲಾವಕಾಶ ನೀಡಬಹುದು ಎಂದು ಹೇಳಿದೆ. 

ಅರ್ಜಿದಾರ ಜಯಾ ಠಾಕೂರ್ ಪರ ಹಾಜರಾದ ವಕೀಲರಿಗೆ ಎಚ್ಚರಿಕೆ ನೀಡಿದ ಪೀಠ, ಸೆಬಿಯ ಯಾವುದೇ ನಿಯಂತ್ರಣ ವೈಫಲ್ಯದ ಬಗ್ಗೆ ಈ ನ್ಯಾಯಾಲಯವು ಏನನ್ನೂ ಹೇಳಿಲ್ಲ ಎಂದು ಹೇಳಿದೆ. ಆರೋಪ ಮಾಡುವಾಗ ಎಚ್ಚರಿಕೆ ವಹಿಸಬೇಕು ಎಂದು ಪೀಠ ಹೇಳಿದೆ. ಇದು ಷೇರುಪೇಟೆಯ ಭಾವನೆಯ ಮೇಲೆ ಪರಿಣಾಮ ಬೀರಬಹುದು. ಇವೆಲ್ಲ ನಿಮ್ಮ ಆರೋಪಗಳಾಗಿದ್ದು, ತನಿಖೆಗೆ ಸಮಿತಿ ರಚಿಸಲಾಗಿದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com