ಜಾಗತಿಕ ಹಂತಕ್ಕೆ ಕೊಂಡೊಯ್ಯಲು ಮುಂದಾದ ಕುಸ್ತಿಪಟುಗಳು: ವಿದೇಶಿ ಒಲಿಂಪಿಯನ್‌ಗಳ ಸಂಪರ್ಕ

ಕುಸ್ತಿ ಫೆಡರೇಷನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ರನ್ನು ಬಂಧಿಸುವಂತೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಒಲಿಂಪಿಕ್ ಪದಕ ವಿಜೇತರು ಮತ್ತು ವಿದೇಶಗಳ ಕ್ರೀಡಾಪಟುಗಳನ್ನು ಸಂಪರ್ಕಿಸಿ ತಮ್ಮ ಆಂದೋಲವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ.
ಕುಸ್ತಿಪಟುಗಳ ಪ್ರತಿಭಟನೆ
ಕುಸ್ತಿಪಟುಗಳ ಪ್ರತಿಭಟನೆ
Updated on

ನವದೆಹಲಿ: ಕುಸ್ತಿ ಫೆಡರೇಷನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ರನ್ನು ಬಂಧಿಸುವಂತೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಒಲಿಂಪಿಕ್ ಪದಕ ವಿಜೇತರು ಮತ್ತು ವಿದೇಶಗಳ ಕ್ರೀಡಾಪಟುಗಳನ್ನು ಸಂಪರ್ಕಿಸಿ ತಮ್ಮ ಆಂದೋಲವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ.

ಮೇ 21ರ ನಂತರ ಆಂದೋಲನದ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕುಸ್ತಿಪಟುಗಳು ತಿಳಿಸಿದ್ದಾರೆ. ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ದೇಶದ ಅಗ್ರ ಕುಸ್ತಿಪಟುಗಳು ಬ್ರಿಜ್ ಭೂಷಣ್ ಬಂಧನಕ್ಕೆ ಒತ್ತಾಯಿಸಿ ಕಳೆದ 23 ದಿನಗಳಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುಸ್ತಿಪಟುಗಳಲ್ಲಿ ಅಪ್ರಾಪ್ತರು ಸೇರಿದ್ದಾನೆ.

ಜಕಾರ್ತಾ ಏಷ್ಯನ್ ಗೇಮ್ಸ್ 2018 ರ ಚಿನ್ನದ ಪದಕ ವಿಜೇತ ವಿನೇಶ್, 'ನಾವು ಈ ಆಂದೋಲನವನ್ನು ವಿಶ್ವ ಮಟ್ಟಕ್ಕೆ ಕೊಂಡೊಯ್ಯುತ್ತೇವೆ. ನಾವು ಇತರ ದೇಶಗಳ ಒಲಿಂಪಿಯನ್‌ಗಳು ಮತ್ತು ಒಲಿಂಪಿಕ್ ಪದಕ ವಿಜೇತರನ್ನು ಸಂಪರ್ಕಿಸುತ್ತೇವೆ. ಅವರ ಬೆಂಬಲ ಕೋರಿ ನಾವು ಅವರಿಗೆ ಪತ್ರ ಬರೆಯುತ್ತೇವೆ ಎಂದರು. 

ಕೆಲವರು ನಮ್ಮ ಪ್ರತಿಭಟನೆಗೆ ಅಡ್ಡಿಪಡಿಸಲು ಪ್ರಯತ್ನಿಸಿದರು. ಕಳೆದ ಬಾರಿ ನಾವು ಪ್ರತಿಭಟನಾ ಸ್ಥಳಕ್ಕೆ ಹಾಸಿಗೆಗಳನ್ನು ತರುತ್ತಿದ್ದಾಗ ಇದು ಸಂಭವಿಸಿತ್ತು ಎಂದು ಹೇಳಿದರು. ತಮ್ಮ ಪ್ರತಿಭಟನೆಯನ್ನು ಜಂತರ್ ಮಂತರ್‌ಗೆ ಸೀಮಿತಗೊಳಿಸುವುದಿಲ್ಲ ಮತ್ತು ದೇಶದ ಪ್ರತಿಯೊಬ್ಬ ನಾಗರಿಕರಿಗೂ ಅವರ ನೋವುಗಳ ಬಗ್ಗೆ ಅರಿವು ಮೂಡಿಸಲು ಪ್ರಯತ್ನಿಸುತ್ತೇನೆ ಎಂದು ವಿನೇಶ್ ಹೇಳಿದರು.

ಜಂತರ್ ಮಂತರ್‌ನಲ್ಲಿ ನಾವು ಒಂದು ಸ್ಥಳಕ್ಕೆ ಸೀಮಿತವಾದಂತೆ ಭಾಸವಾಗುತ್ತದೆ. ಆದ್ದರಿಂದ ನಾವು ಇತರ ಸ್ಥಳಗಳಲ್ಲಿ ಎಷ್ಟು ಹೆಚ್ಚು ಪ್ರತಿಭಟಿಸುತ್ತೇವೆ, ಜನರು ನಮ್ಮ ಸ್ಥಾನವನ್ನು ಅರ್ಥಮಾಡಿಕೊಳ್ಳುತ್ತಾರೆ ಎಂದರು. 

ಇಂದು ನಾವು ಕನ್ನಾಟ್ ಪ್ಲೇಸ್‌ಗೆ ಹೋಗಿ ಅಲ್ಲಿನ ಜನರೊಂದಿಗೆ ಮಾತನಾಡಲು ನಿರ್ಧರಿಸಿದ್ದೇವೆ ಮತ್ತು ನ್ಯಾಯಕ್ಕಾಗಿ ನಮ್ಮ ಹೋರಾಟಕ್ಕೆ ಬೆಂಬಲ ಕೋರಿದ್ದೇವೆ. ನಾವು ಮೇ 21 ಅನ್ನು ಗಡುವು ಎಂದು (ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ) ನಿಗದಿಪಡಿಸಿದ್ದೇವೆ ಮತ್ತು ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ, ನಂತರ ನಾವು ನಮ್ಮ ಆಂದೋಲನದ ಬಗ್ಗೆ ಪ್ರಮುಖ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com