ನನ್ನನ್ನು ಜೈಲಿಗೆ ಕಳುಹಿಸಲು ಮಹಾ ಸರ್ಕಾರ ಪರಂ ಬೀರ್‌ ಸಿಂಗ್‌ ರನ್ನು ಬಳಸಿಕೊಂಡಿತು: ಅನಿಲ್‌ ದೇಶಮುಖ್‌

ಮುಂಬೈ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ವಿರುದ್ಧದ ಆರೋಪಗಳನ್ನು ಮಹಾರಾಷ್ಟ್ರ ಸರ್ಕಾರ ಕೈಬಿಟ್ಟ ನಂತರ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ನಾಯಕ ಅನಿಲ್ ದೇಶಮುಖ್, ರಾಜ್ಯ ಸರ್ಕಾರ, ನನ್ನನ್ನು ಬಂಧಿಸಲು...
ಪರಮ್ ಬೀರ್ ಸಿಂಗ್
ಪರಮ್ ಬೀರ್ ಸಿಂಗ್
Updated on

ಮುಂಬೈ: ಮುಂಬೈ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ವಿರುದ್ಧದ ಆರೋಪಗಳನ್ನು ಮಹಾರಾಷ್ಟ್ರ ಸರ್ಕಾರ ಕೈಬಿಟ್ಟ ನಂತರ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ನಾಯಕ ಅನಿಲ್ ದೇಶಮುಖ್, ರಾಜ್ಯ ಸರ್ಕಾರ, ನನ್ನನ್ನು ಬಂಧಿಸಲು ಸಿಂಗ್ ಅವರನ್ನು ಬಳಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

"ಪರಮ್ ಬೀರ್ ಸಿಂಗ್ ಅವರನ್ನು ಮಹಾರಾಷ್ಟ್ರ ಸರ್ಕಾರ ನನ್ನನ್ನು ಬಂಧಿಸಲು ಬಳಸಿಕೊಂಡಿತು ಮತ್ತು ಅದರ ಪ್ರತಿಫಲವಾಗಿ ಅವರ ಅಮಾನತು ಹಿಂಪಡೆಯಲಾಗಿದೆ ಎಂದು ಅನಿಲ್ ದೇಶಮುಖ್ ಹೇಳಿದ್ದಾರೆ.

ಈ ವಿಚಾರವನ್ನು ನಾನು ಇಂದು ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ ಎಂದು ದೇಶಮುಖ್ ತಿಳಿಸಿದ್ದಾರೆ.

ಮೇ 12 ರಂದು ಮಹಾರಾಷ್ಟ್ರ ಸರ್ಕಾರ, ಪರಮ್ ಬೀರ್ ಸಿಂಗ್ ವಿರುದ್ಧದ ಎಲ್ಲಾ ಆರೋಪಗಳನ್ನು ಕೈಬಿಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com