ಜಾರ್ಖಂಡ್‌ನಲ್ಲಿ ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ, ನಂತರ ಗುಂಡಿನ ದಾಳಿ!

ಪತ್ರಕರ್ತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಅಲ್ಲದೆ ಗುಂಡಿನ ದಾಳಿ ನಡೆಸಿದ್ದಾರೆ. 
ಪ್ರವೀಣ್ ಕುಮಾರ್
ಪ್ರವೀಣ್ ಕುಮಾರ್
Updated on

ಧನ್ಬಾದ್(ಜಾರ್ಖಂಡ್): ಪತ್ರಕರ್ತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಅಲ್ಲದೆ ಗುಂಡಿನ ದಾಳಿ ನಡೆಸಿದ್ದಾರೆ. 

ಬುಧವಾರ ರಾತ್ರಿ, ಬೈಕ್ ನಲ್ಲಿ ಬಂದ ದುಷ್ಕರ್ಮಿಗಲು ದಿನಪತ್ರಿಕೆಯ ಪ್ರಾದೇಶಿಕ ವರದಿಗಾರ ಪ್ರವೀಣ್ ಕುಮಾರ್ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ. ಪ್ರವೀಣ್ ಕುಮಾರ್ ಅವರ ಸ್ಥಿತಿ ಚಿಂತಾಜನಕವಾಗಿದೆ. ಧನ್ಬಾದ್ ಶಹೀದ್ ನಿರ್ಮಲ್ ಮಹತೋ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯರು ಅವರನ್ನು ಉತ್ತಮ ಚಿಕಿತ್ಸೆಗಾಗಿ ರಾಂಚಿ ರಿಮ್ಸ್‌ಗೆ ಕಳುಹಿಸಿದ್ದಾರೆ ಬಲ್ಲಿಯಾಪುರ ರಂಗಮತಿ ಸಿಂದ್ರಿ ಬಲ್ಲಿಯಾಪುರ ರಸ್ತೆಯ ಬಳಿ ಪ್ರವೀರ್ ಮಹತೋ ಮೇಲೆ ಹಲ್ಲೆ ನಡೆಸಿ ನಂತರ ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರವೀಣ್ ಕುಮಾರ್ ಅವರ ಮೂತ್ರಪಿಂಡದ ಮೇಲ್ಭಾಗದಲ್ಲಿ ಗುಂಡು ಸಿಲುಕಿಕೊಂಡಿದೆ. ಪ್ರವೀಣ್ ಕುಮಾರ್ ಅವರ ಗಂಭೀರ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಧನ್‌ಬಾದ್ ಪೊಲೀಸರ ಕಾರ್ಯಶೈಲಿಯ ಬಗ್ಗೆ ಮತ್ತೆ ಪ್ರಶ್ನೆಗಳು ಎದ್ದಿವೆ. ಇಷ್ಟು ದೊಡ್ಡ ಘಟನೆ ನಡೆದರೂ ಪೊಲೀಸ್ ಇಲಾಖೆಯ ಯಾವೊಬ್ಬ ಹಿರಿಯ ಅಧಿಕಾರಿಯೂ ತನಿಖೆಗೆ ಮುಂದಾಗದಿರುವುದು ಪತ್ರಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಅದೇ ಸಮಯದಲ್ಲಿ, ಯಾವ ಉದ್ದೇಶಕ್ಕಾಗಿ ದುಷ್ಕರ್ಮಿಗಳು ಪತ್ರಕರ್ತ ಪ್ರವೀಣ್ ಕುಮಾರ್ ಮೇಲೆ ಗುಂಡು ಹಾರಿಸಿದ್ದಾನೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆಯ ಮಾಹಿತಿ ಪಡೆದು ತಡರಾತ್ರಿಯೇ ಪತ್ರಕರ್ತರ ಜಮಾವಣೆ ಆರಂಭಗೊಂಡಿದ್ದು, ಸ್ಥಳೀಯ ಜನಪ್ರತಿನಿಧಿಗಳ ಜತೆಗೆ ಎಸ್‌ಎನ್‌ಎಂಎಂಸಿಎಚ್‌ ಆಸ್ಪತ್ರೆಗೆ ಆಗಮಿಸಿ ಪೊಲೀಸರ ಕಾರ್ಯವೈಖರಿ ಖಂಡಿಸಿ ದುಷ್ಕರ್ಮಿಗಳನ್ನು ಆದಷ್ಟು ಬೇಗ ಬಂಧಿಸುವಂತೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com