ನವದೆಹಲಿ: ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರು ಕಳೆದ ರಾತ್ರಿ ತಿಹಾರ್ ಜೈಲಿನಲ್ಲಿ ಸ್ನಾನಗೃಹದಲ್ಲಿ ಕಾಲುಜಾರಿ ಬಿದ್ದು ಅವರನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಒಂದು ವಾರದಲ್ಲಿ ಜೈನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವುದು ಇದು ಎರಡನೇ ಬಾರಿ. ಕೆಲವೇ ದಿನಗಳ ಹಿಂದೆ ಬೆನ್ನುಮೂಳೆಯ ಸಮಸ್ಯೆಯ ಕಾರಣ ಅವರನ್ನು ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
2022 ರ ಮೇ 31 ರಂದು ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್ ಅವರನ್ನು ಬಂಧಿಸಿತ್ತು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸಂಪುಟದ ಮಾಜಿ ಸಹೋದ್ಯೋಗಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಮೋದಿ ಸರ್ಕಾರವು ತಮ್ಮ ಮಾಜಿ ಸಹೋದ್ಯೋಗಿ ಮೇಲೆ ಅಹಂಕಾರ ಮತ್ತು ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ.
Advertisement