ಪೊಲೀಸ್ ಅಧಿಕಾರಿ, ಕಾರ್ಮಿಕನನ್ನು ಗುಂಡಿಟ್ಟು ಕೊಂದ ಉಗ್ರರು; ಕಾಶ್ಮೀರದಾದ್ಯಂತ ಬಿಗಿ ಭದ್ರತೆ

ಕಣಿವೆಯಲ್ಲಿ ಭಯೋತ್ಪಾದಕರ ದಾಳಿಗೆ ಪೊಲೀಸ್ ಸಿಬ್ಬಂದಿ ಮತ್ತು ಕಾರ್ಮಿಕರೊಬ್ಬರ ಹತ್ಯೆಗೆ ಕಾರಣವಾದ ಹಿನ್ನಲೆಯಲ್ಲಿ ಕಾಶ್ಮೀರದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಶ್ರೀನಗರ: ಕಣಿವೆಯಲ್ಲಿ ಭಯೋತ್ಪಾದಕರ ದಾಳಿಗೆ ಪೊಲೀಸ್ ಸಿಬ್ಬಂದಿ ಮತ್ತು ಕಾರ್ಮಿಕರೊಬ್ಬರ ಹತ್ಯೆಗೆ ಕಾರಣವಾದ ಹಿನ್ನಲೆಯಲ್ಲಿ ಕಾಶ್ಮೀರದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಪಡೆಗಳು ನಗರದ ಹಲವಾರು ಭಾಗಗಳಲ್ಲಿ ಮತ್ತು ಕಣಿವೆಯ ಇತರ ಭಾಗಗಳಲ್ಲಿ ವಾಹನಗಳು ಮತ್ತು ಪಾದಚಾರಿಗಳ ತಪಾಸಣೆಯನ್ನು ತೀವ್ರಗೊಳಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಕಾಸ್ ಮತ್ತು ಮೊಬೈಲ್ ವೆಹಿಕಲ್ ಚೆಕ್‌ಪೋಸ್ಟ್‌ಗಳನ್ನು (ಎಂವಿಸಿಪಿ) ನಗರದ ಎಲ್ಲಾ ಪ್ರಮುಖ ಪ್ರವೇಶ ಮತ್ತು ನಿರ್ಗಮನ ಬಿಂದುಗಳು ಮತ್ತು ಜಿಲ್ಲಾ ಕೇಂದ್ರಕ್ಕೆ ಹೋಗುವ ಪ್ರಮುಖ ರಸ್ತೆಗಳಲ್ಲಿ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಅರೆಸೈನಿಕ ಸಿಆರ್‌ಪಿಎಫ್ ಸಿಬ್ಬಂದಿಯನ್ನು ಸೂಕ್ಷ್ಮ ಸ್ಥಳಗಳಲ್ಲಿ ವಿಶೇಷವಾಗಿ ಅಲ್ಪಸಂಖ್ಯಾತ ಜನಸಂಖ್ಯೆಯ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ಸ್ಥಳೀಯರಲ್ಲದ ಇತರ ಕಡೆಗಳಿಂದ ಬಂದವರು ವಾಸಿಸುವ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ನಿಗಾ ಇರಿಸುತ್ತಿವೆ. ಚಳಿಯ ವಾತಾವರಣದಿಂದಾಗಿ ಹೆಚ್ಚಿನ ಕಾರ್ಮಿಕರು ಕಣಿವೆಯನ್ನು ತೊರೆದಿದ್ದರೆ, ಇನ್ನೂ ಕೆಲವರು ಘೆಟ್ಟೋಗಳಲ್ಲಿ ನೆಲೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಣಿವೆಯಲ್ಲಿ ಮತ್ತೆ ಭಯೋತ್ಪಾದಕ ದಾಳಿ

ಉಗ್ರರು ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯನ್ನು ಅವರ ಮನೆಯ ಹೊರಗೆ ಗುಂಡಿಕ್ಕಿ ಕೊಂದಿದ್ದಾರೆ.

ಭಾನುವಾರ, ಶ್ರೀನಗರದಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ತೀವ್ರವಾಗಿ ಗಾಯಗೊಂಡಿದ್ದರೆ, ಸೋಮವಾರ ಪುಲ್ವಾಮಾ ಜಿಲ್ಲೆಯಲ್ಲಿ ಉತ್ತರ ಪ್ರದೇಶದ ಕಾರ್ಮಿಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com