ತಮಿಳುನಾಡು: ಎಸ್‌ಸಿ ಯುವಕರ ಮೇಲೆ ಹಲ್ಲೆ, ಮೂತ್ರ ವಿಸರ್ಜನೆ ಮಾಡಿದ ಆರು ಮಂದಿ ಬಂಧನ

ಪರಿಶಿಷ್ಟ ಜಾತಿಯ ಇಬ್ಬರು ಯುವಕರ ಮೇಲೆ ಹಲ್ಲೆ, ವಿವಸ್ತ್ರಗೊಳಿಸಿ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಆರು ಮಂದಿಯನ್ನು ತಿರುನೆಲ್ವೇಲಿ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬಂಧಿತರೆಲ್ಲರೂ 21 ರಿಂದ 25 ವರ್ಷ ವಯಸ್ಸಿನವರಾಗಿದ್ದು, ಮದ್ಯದ ಅಮಲಿನಲ್ಲಿದ್ದರು ಎಂದು ಹೇಳಲಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತಿರುನೆಲ್ವೇಲಿ: ಪರಿಶಿಷ್ಟ ಜಾತಿಯ ಇಬ್ಬರು ಯುವಕರ ಮೇಲೆ ಹಲ್ಲೆ, ವಿವಸ್ತ್ರಗೊಳಿಸಿ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಆರು ಮಂದಿಯನ್ನು ತಿರುನೆಲ್ವೇಲಿ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬಂಧಿತರೆಲ್ಲರೂ 21 ರಿಂದ 25 ವರ್ಷ ವಯಸ್ಸಿನವರಾಗಿದ್ದು, ಮದ್ಯದ ಅಮಲಿನಲ್ಲಿದ್ದರು ಎಂದು ಹೇಳಲಾಗಿದೆ. 

ಪರಿಶಿಷ್ಟ ಜಾತಿಯ ಯುವಕರು ತಮ್ಮ ಗುರುತನ್ನು ಬಹಿರಂಗಪಡಿಸಿದ ನಂತರ ಆರು ಜನರ ತಂಡ ತಾಮಿರಬರಣಿ ನದಿಯಿಂದ ಸ್ನಾನ ಮುಗಿಸಿ ಹಿಂದಿರುಗುತ್ತಿದ್ದ ಇಬ್ಬರ ಮೇಲೆ ಹಲ್ಲೆ, ವಿವಸ್ತ್ರಗೊಳಿಸಿ ಮತ್ತು ಮೂತ್ರ ವಿಸರ್ಜನೆ ಮಾಡಿದೆ. ಈ ಸಂಬಂಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ತಚ್ಚನಲ್ಲೂರು ಪೊಲೀಸರು ತಿಳಿಸಿದ್ದಾರೆ.

ಸದ್ಯ ತಿರುನಲ್ವೇಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತರ ಪ್ರಕಾರ, ಎರಡು ಮೊಬೈಲ್ ಫೋನ್‌ಗಳು, ಬೆಳ್ಳಿ ಆಭರಣ ಹಾಗೂ 5,000 ನಗದನ್ನು ತಂಡ ದರೋಡೆ ಮಾಡಿದೆ.  ಆ ತಂಡ ಸೋಮವಾರ  ನದಿಯಲ್ಲಿ ಸ್ನಾನ ಮುಗಿಸಿ ಬೈಕ್‌ನಲ್ಲಿ ಹೋಗಲು ತಯಾರಾಗುತ್ತಿದ್ದಾಗ  ನಮ್ಮನ್ನು ಕರೆದು  ಜಾತಿ ಮತ್ತು ಸ್ಥಳೀಯ ಸ್ಥಳದ ಬಗ್ಗೆ ಕೇಳಿದರು. ನಂತರ ನಾವು ಉತ್ತರಿಸಿದ ಕೂಡಲೇ  ದೊಣ್ಣೆ ಹಾಗೂ ಚಾಕುವಿನಿಂದ ಹಲ್ಲೆ ಮಾಡಲು ಶುರು ಮಾಡಿದರು ಎಂದು ತಿಳಿಸಿದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com