ಜೈಪುರ: ಸೋಮವಾರ ಮುಂಜಾನೆ ನಿಯಂತ್ರಣ ತಪ್ಪಿದ ಬಸ್ಸೊಂದು ರಾಜಸ್ಥಾನದ ದೌಸಾದಲ್ಲಿ ಸೇತುವೆ ಮೇಲಿಂದ ರೈಲ್ವೆ ಹಳಿಗಳ ಮೇಲೆ ಬಿದ್ದ ಪರಿಣಾಮ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಅಪಘಾತದ ವೇಳೆ ಬಸ್ನಲ್ಲಿ ಸುಮಾರು 30 ಮಂದಿ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ.
ಸದ್ಯ 28 ಮಂದಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅದರಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ. ಎಂದು ಕಸ್ವಾ ದೌಸಾ ಎಡಿಎಂ ರಾಜ್ಕುಮಾರ್ ಸುದ್ದಿಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.
'ಅಪಘಾತದ ನಂತರ 28 ಜನರನ್ನು ಆಸ್ಪತ್ರೆಗೆ ಕರೆತರಲಾಯಿತು. ಅದರಲ್ಲಿ 4 ಜನರು ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಘಟನೆ ಬಗ್ಗೆ ತನಿಖೆಗಾಗಿ ಎಸ್ಡಿಎಂ ಅನ್ನು ಸ್ಥಳಕ್ಕೆ ಕಳುಹಿಸಲಾಗಿದೆ' ಎಂದು ರಾಜ್ಕುಮಾರ್ ಹೇಳಿದರು.
ಘಟನೆ ನಡೆದಾಗ ಬಸ್ ಹರಿದ್ವಾರದಿಂದ ಉದಯಪುರಕ್ಕೆ ತೆರಳುತ್ತಿತ್ತು ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
Advertisement