ದೆಹಲಿ ವಾಯು ಮಾಲಿನ್ಯ: ಸಮ-ಬೆಸ ಸಂಖ್ಯೆ ನಿಯಮ ಹಿಂಪಡೆದ ಸರ್ಕಾರ

ಮಳೆ ಬಂದ ಪರಿಣಾಮ ದೆಹಲಿಯಲ್ಲಿ ವಾಯುಗುಣಮಟ್ಟ ಸುಧಾರಣೆಯಾದ ಪರಿಣಾಮ ನ.13-20 ವರೆಗೆ ನಿಗದಿಯಾಗಿದ್ದ ಸಮ-ಬೆಸ ಸಂಖ್ಯೆ ನಿಯಮ ಜಾರಿಯಾಗುವುದಿಲ್ಲ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.
ದೆಹಲಿಯಲ್ಲಿ ವಾಯುಮಾಲಿನ್ಯ
ದೆಹಲಿಯಲ್ಲಿ ವಾಯುಮಾಲಿನ್ಯ

ನವದೆಹಲಿ: ಮಳೆ ಬಂದ ಪರಿಣಾಮ ದೆಹಲಿಯಲ್ಲಿ ವಾಯುಗುಣಮಟ್ಟ ಸುಧಾರಣೆಯಾದ ಪರಿಣಾಮ ನ.13-20 ವರೆಗೆ ನಿಗದಿಯಾಗಿದ್ದ ಸಮ-ಬೆಸ ಸಂಖ್ಯೆ ನಿಯಮ ಜಾರಿಯಾಗುವುದಿಲ್ಲ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೋಪಾಲ್ ರೈ, ದೀಪಾವಳಿ ಬಳಿಕ ವಾಯುಗುಣಮಟ್ಟವನ್ನು ಪರಿಶೀಲಿಸಿ ಬಳಿಕ ವಾಹನಗಳ ಸಂಚಾರಕ್ಕೆ ಸಂಬಂಧಿಸಿದಂತೆ ಸಮ-ಬೆಸ ಯೋಜನೆ ಜಾರಿಗೊಳಿಸುವುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಪರಿಣಾಮಕಾರಿತ್ವವನ್ನು ಪರಿಶೀಲಿಸಿ ಆದೇಶ ಹೊರಡಿಸಿದ ನಂತರ ನಗರದಲ್ಲಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ರೈ ಈ ಹಿಂದೆ ತಿಳಿಸಿದ್ದರು.

ಮಂಗಳವಾರ, ಸುಪ್ರೀಂ ಕೋರ್ಟ್ ವಾಹನ ಮಾಲಿನ್ಯವನ್ನು ತಡೆಗಟ್ಟುವ ಉದ್ದೇಶದಿಂದ ದೆಹಲಿ ಸರ್ಕಾರದ ಕಾರು-ಪಡಿತರ ಯೋಜನೆಯ ಪರಿಣಾಮಕಾರಿತ್ವವನ್ನು ಪ್ರಶ್ನಿಸಿತ್ತು.

ದೀಪಾವಳಿಯ ನಂತರದ ಗಾಳಿಯ ಗುಣಮಟ್ಟ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ ಎಂದು ಹೇಳಿದ್ದ ರೈ, ಕಾರುಗಳು ತಮ್ಮ ನೋಂದಣಿ ಸಂಖ್ಯೆಗಳ ಬೆಸ ಅಥವಾ ಕೊನೆಯ ಅಂಕಿಗಳ ಆಧಾರದ ಮೇಲೆ ಪರ್ಯಾಯ ದಿನಗಳಲ್ಲಿ ಕಾರ್ಯನಿರ್ವಹಿಸಲು ಅನುಮತಿಸುವ ಯೋಜನೆಯನ್ನು ನವೆಂಬರ್ 13 ಮತ್ತು ನವೆಂಬರ್ 20 ರ ನಡುವೆ ಜಾರಿಗೊಳಿಸಲಾಗುವುದು ಎಂದು ಸೋಮವಾರ ಘೋಷಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com