ಹೈದರಾಬಾದ್: ರಾಸಾಯನಿಕ ಗೋದಾಮಿನಲ್ಲಿ ಅಗ್ನಿ ಅವಘಡ, 9 ಮಂದಿ ಸಜೀವ ದಹನ

ಹೈದಾರಾಬಾದ್'ನಲ್ಲಿ ದೀಪಾವಳಿ ಹಬ್ಬದಂದೇ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 9 ಮಂದಿ ಸಜೀವ ದಹನಗೊಂಡಿದ್ದಾರೆ.
ಕಟ್ಟಡದಲ್ಲಿ ಸಿಲುಕಿದ್ದ ಮಗುವನ್ನು ರಕ್ಷಣೆ ಮಾಡುತ್ತಿರುವುದು.
ಕಟ್ಟಡದಲ್ಲಿ ಸಿಲುಕಿದ್ದ ಮಗುವನ್ನು ರಕ್ಷಣೆ ಮಾಡುತ್ತಿರುವುದು.

ಹೈದರಾಬಾದ್​(ತೆಲಂಗಾಣ): ಹೈದಾರಾಬಾದ್'ನಲ್ಲಿ ದೀಪಾವಳಿ ಹಬ್ಬದಂದೇ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 9 ಮಂದಿ ಸಜೀವ ದಹನಗೊಂಡಿದ್ದಾರೆ.

ನಾಂಪಲ್ಲಿ ಬಜಾರ್ ಘಾಟ್‌ನಲ್ಲಿ ನಾಲ್ಕು ಅಂತಸ್ತಿನ ರಾಸಾಯನಿಕ ಗೋದಾಮಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಸ್ಥಳದಲ್ಲಿ 16 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಮೂವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

'ಕಟ್ಟಡದ ನೆಲಮಹಡಿಯಲ್ಲಿ ಕಾರ್‌ ರಿಪೇರಿ ಮಾಡಲಾಗುತ್ತಿತ್ತು. ಈ ವೇಳೆ ಅಲ್ಲೇ ಇದ್ದ ರಾಸಾಯನಿಕ ತುಂಬಿದ್ದ ಡ್ರಮ್‌ಗಳಿಗೆ ಬೆಂಕಿ ತಗುಲಿ ಬೆಳಿಗ್ಗೆ 9.30ರ ಸುಮಾರಿಗೆ ಅವಘಡ ಸಂಭವಿಸಿದೆ. ಕೆಲ ಹೊತ್ತಿನಲ್ಲೇ ಉಳಿದ ಮಹಡಿಗಳಿಗೂ ಬೆಂಕಿ ವ್ಯಾಪಿಸಿದೆ' ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಗ್ನಿ ಅವಘಡದಲ್ಲಿ ಗೋದಾಮಿನಲ್ಲಿದ್ದ ಕಾರು ಹಾಗೂ ಎರಡು ಸೈಕಲ್ ಸುಟ್ಟು ಕರಕಲಾಗಿವೆ. ಸ್ಥಳದಲ್ಲಿ ಬೆಂಕಿ ನಂದಿಸುವ ಹಾಗೂ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com