ಸೂರತ್: ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದಿದ್ದ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವು

ಟ್ಯಾಂಕ್ ಟ್ಯಾಂಸ್ವಚ್ಛಗೊಳಿಸಲು ಇಳಿದಿದ್ದ ನಾಲ್ಕು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಸೂರತ್‌(ಗುಜರಾತ್): ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದಿದ್ದ ನಾಲ್ಕು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.

ನಗರದ ಪಲ್ಸಾನ ಕಡೋದರ ರಸ್ತೆಯಲ್ಲಿರುವ ರಾಜಹಂಸ್ ಟೆಕ್ಸ್ ಹೆಸರಿನ ಮಿಲ್‌ನಲ್ಲಿ ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕಾಮರಾಜ್ ಇಆರ್‌ಸಿ ಅಗ್ನಿಶಾಮಕ ಮತ್ತು ಬಾರ್ಡೋಲಿ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ನಾಲ್ವರು ಕಾರ್ಮಿಕರ ಮೃತ ದೇಹಗಳನ್ನು ಹೊರತೆಗೆದಿದ್ದಾರೆ.

ಎರಡು ದಿನಗಳ ಹಿಂದೆ ಭಾವನಗರದಲ್ಲಿ ಕ್ಲೀನರ್ ಸಾವನ್ನಪ್ಪಿದ ಪ್ರಕರಣದಲ್ಲಿ 48 ಗಂಟೆಗಳ ನಂತರ ಮೃತದೇಹವನ್ನು ಕುಟುಂಬದವರು ಸ್ವೀಕರಿಸಿದರು. ನಗರದ ಸೆಂಟ್ರಲ್ ನಲ್ಲಿ ಡ್ರೈನೇಜ್ ಕ್ಲೀನಿಂಗ್ ವೇಳೆ ರಕ್ಷಿಸಲಾಗಿದ್ದ ರಾಜೇಶಭಾಯಿ ವೇಗಡ್ ಮೃತಪಟ್ಟಿದ್ದು, ವಿವಿಧ ಬೇಡಿಕೆಗಳನ್ನಿಟ್ಟು ಶವ ಸ್ವೀಕರಿಸಲು ಕುಟುಂಬದವರು ನಿರಾಕರಿಸಿದ್ದು, ಬಳಿಕ ನಗರಸಭೆ ಬಹುತೇಕ ಬೇಡಿಕೆಗಳನ್ನು ಒಪ್ಪಿಕೊಂಡಿದ್ದರಿಂದ ಸಮಸ್ಯೆ ಬಗೆಹರಿದಿತ್ತು. 

ಮೃತರ ಕುಟುಂಬಕ್ಕೆ ಪರಿಹಾರವಾಗಿ 30 ಲಕ್ಷ ರೂ.ಗಳ ಚೆಕ್ ನೀಡಲಾಯಿತು. ಅಲ್ಲದೇ ಈ ವೇಳೆ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡುವಂತೆ ಎಂಎನ್ ಪಿಯಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು. ಇಡೀ ಪ್ರಕರಣದಲ್ಲಿ ರಾಜೇಶಭಾಯಿ ವೇಗಡ್ ಸಾವಿನ ಕುರಿತು ಹೆಚ್ಚಿನ ತನಿಖೆ ನಡೆಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com