ಬಿಜೆಪಿಗೆ ಹಿರಿಯ ನಟಿ ವಿಜಯಶಾಂತಿ ಗುಡ್ ಬೈ; ಕಾಂಗ್ರೆಸ್ ಸೇರುವ ಸಾಧ್ಯತೆ!

ತೆಲಂಗಾಣ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ಮಾಜಿ ಸಂಸದೆ ಹಾಗೂ ಹಿರಿಯ ನಟಿ ವಿಜಯಶಾಂತಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.  ಶುಕ್ರವಾರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು  ತಿಳಿಸಿವೆ.
ವಿಜಯಶಾಂತಿ
ವಿಜಯಶಾಂತಿ
Updated on

ಹೈದ್ರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ಮಾಜಿ ಸಂಸದೆ ಹಾಗೂ ಹಿರಿಯ ನಟಿ ವಿಜಯಶಾಂತಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.  ಶುಕ್ರವಾರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು  ತಿಳಿಸಿವೆ.

ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ಯಾವುದೇ  ಕಾರ್ಯಕ್ರಮಗಳಲ್ಲಿ ಅವರು ಸಕ್ರಿಯವಾಗಿ ಭಾಗವಹಿಸುತ್ತಿರಲಿಲ್ಲ. 2009ರಲ್ಲಿ ತನ್ನ ರಾಜಕೀಯ ವೃತ್ತಿಜೀವನ ಆರಂಭಿಸಿದ ನಟಿ- ರಾಜಕಾರಣಿ ಬಿಆರ್ ಎಸ್ ಟಿಕೆಟ್ ನಿಂದ ಮೇದಕ್ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದರು. 

ನಂತರ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರೊಂದಿಗಿನ ಭಿನ್ನಾಭಿಪ್ರಾಯದಿಂದ ಅವರು ಕಾಂಗ್ರೆಸ್ ಸೇರಿ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದ ವಿಜಯಶಾಂತಿ 2020 ರಲ್ಲಿ ಬಿಜೆಪಿ ಸೇರಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com