ಹರಿಯಾಣ: ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಶೇ. 75ರಷ್ಟು ಮೀಸಲಾತಿ ನೀಡುವ ಕಾನೂನು ರದ್ದುಗೊಳಿಸಿದ ಪಂಜಾಬ್ ಹೈಕೋರ್ಟ್

ಸ್ಥಳೀಯರಿಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಶೇಕಡ 75ರಷ್ಟು ಮೀಸಲಾತಿಯನ್ನು ಒದಗಿಸುವ 2020ರ ಹರಿಯಾಣ ಸರ್ಕಾರದ ಕಾನೂನನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಚಂಡೀಗಢ: ಸ್ಥಳೀಯರಿಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಶೇಕಡ 75ರಷ್ಟು ಮೀಸಲಾತಿಯನ್ನು ಒದಗಿಸುವ 2020ರ ಹರಿಯಾಣ ಸರ್ಕಾರದ ಕಾನೂನನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. 

ನ್ಯಾಯಮೂರ್ತಿಗಳಾದ ಜಿಎಸ್ ಸಂಧವಾಲಿಯಾ ಮತ್ತು ಹರ್‌ಪ್ರೀತ್ ಕೌರ್ ಜೀವನ್ ಅವರು ಈ ಕಾನೂನನ್ನು ರದ್ದುಗೊಳಿಸಿದ್ದಾರೆ. ಪೀಠವು ಸಂಪೂರ್ಣ ಕಾಯಿದೆಯನ್ನು ರದ್ದುಪಡಿಸಿದೆ ಎಂದು ಹಿರಿಯ ವಕೀಲ ಅಕ್ಷಯ್ ಭಾನ್ ತಿಳಿಸಿದರು.

ಅರ್ಜಿದಾರರ ಪರ ವಕೀಲರಾದ ಭಾನ್, ಹರಿಯಾಣ ರಾಜ್ಯ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಕಾಯಿದೆ, 2020 ಸಂವಿಧಾನದ 14 ಮತ್ತು 19ನೇ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಲಾಗಿದೆ ಎಂದು ಹೇಳಿದರು.

ರಾಜ್ಯದ ಅಭ್ಯರ್ಥಿಗಳಿಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಶೇಕಡಾ 75ರಷ್ಟು ಮೀಸಲಾತಿ ನೀಡುವ ಕಾಯಿದೆಯ ಅನುಷ್ಠಾನದ ವಿರುದ್ಧ ನ್ಯಾಯಾಲಯವು ಹಲವಾರು ಅರ್ಜಿಗಳನ್ನು ಸ್ವೀಕರಿಸಿತ್ತು. ಇದು ಗರಿಷ್ಠ ಒಟ್ಟು ಮಾಸಿಕ ವೇತನ ಅಥವಾ ರೂ 30,000 ವರೆಗಿನ ಭತ್ಯೆಯನ್ನು ನೀಡುವ ಉದ್ಯೋಗಗಳನ್ನು ಒಳಗೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com