ವಾರಣಾಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಶನಿವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್ಐ) ಇನ್ನೂ 10 ದಿನಗಳ ಕಾಲಾವಕಾಶ ನೀಡಿದೆ.
ವರದಿ ಸಲ್ಲಿಸಲು ಎಎಸ್ಐಗೆ ನವೆಂಬರ್ 17 ರವರೆಗೆ ಸಮಯ ನೀಡಲಾಗಿತ್ತು. ಆದರೆ ಶುಕ್ರವಾರ ಎಎಸ್ಐ ವಕೀಲರು ನ್ಯಾಯಾಲಯದಿಂದ 15 ದಿನಗಳ ಕಾಲಾವಕಾಶ ಕೋರಿದ್ದರು.
ಹಿಂದೂ ಪರ ಮದನ್ ಮೋಹನ್ ಯಾದವ್ ಪರ ವಕೀಲರ ಪ್ರಕಾರ, ತಾಂತ್ರಿಕ ವರದಿ ಲಭ್ಯವಿಲ್ಲದ ಕಾರಣ ಎಎಸ್ಐ ಹೆಚ್ಚಿನ ಕಾಲಾವಕಾಶ ಕೋರಿದೆ.
ಇಂದು ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶ ಎ ಕೆ ವಿಶ್ವೇಶ್ ಅವರು, ನವೆಂಬರ್ 28 ರೊಳಗೆ ವರದಿ ಸಲ್ಲಿಸುವಂತೆ ಎಎಸ್ಐಗೆ ಸೂಚಿಸಿದ್ದಾರೆ.
ASI ಇಲ್ಲಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆ ನಡೆಸುತ್ತಿದೆ.
Advertisement