ನಡುಗುತ್ತಿದೆ ಕಾಶ್ಮೀರ, ಶ್ರೀನಗರದಲ್ಲಿ ಕನಿಷ್ಠ ತಾಪಮಾನ 0.9 ಡಿಗ್ರಿ ಸೆಲ್ಸಿಯಸ್ ದಾಖಲು

ಕಣಿವೆ ರಾಜ್ಯ ಶೀತಗಾಳಿಯಿಂದ ತತ್ತರಿಸಿದ್ದು, ಕಳೆದ ರಾತ್ರಿ ಕಾಶ್ಮೀರದ ಬಹುತೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಶೂನ್ಯಕ್ಕಿಂತ ಕಡಿಮೆ ದಾಖಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಕಣಿವೆ ರಾಜ್ಯ ಶೀತಗಾಳಿಯಿಂದ ತತ್ತರಿಸಿದ್ದು, ಕಳೆದ ರಾತ್ರಿ ಕಾಶ್ಮೀರದ ಬಹುತೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಶೂನ್ಯಕ್ಕಿಂತ ಕಡಿಮೆ ದಾಖಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಕನಿಷ್ಠ ತಾಪಮಾನ 0.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಳೆದ ಐದು ದಿನಗಳಲ್ಲಿ ಮೊದಲ ಬಾರಿಗೆ ನಗರದಲ್ಲಿ ಕನಿಷ್ಠ ತಾಪಮಾನವು ಘನೀಕರಿಸುವ ಹಂತಕ್ಕಿಂತ ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಂಡಿಪೋರಾ, ಬಾರಾಮುಲ್ಲಾ, ಗಂದರ್‌ಬಾಲ್, ಕೋಕರ್‌ನಾಗ್, ಕುಲ್ಗಾಮ್ ಮತ್ತು ಕುಪ್ವಾರದಲ್ಲಿ ಶೂನ್ಯ ಡಿಗ್ರಿ ಸೆಲ್ಸಿಯಸ್ ನಿಂದ 1.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ ಎಂದು ಅವರು ಹೇಳಿದ್ದಾರೆ.

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಪ್ರವಾಸಿಧಾಮದಲ್ಲಿ ಮೈನಸ್ 3.3 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದು, ಇದು ಕಣಿವೆಯ ಅತ್ಯಂತ ಹೆಚ್ಚು ಚಳಿಯ ಸ್ಥಳವಾಗಿದೆ. ನಂತರ ಶೋಪಿಯಾನದಲ್ಲಿ ಮೈನಸ್ 2.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com