ಹಳಿ ದಾಟುತ್ತಿದ್ದ ಆನೆಗಳಿಗೆ ಗೂಡ್ಸ್ ರೈಲು ಡಿಕ್ಕಿ: ಮರಿ ಸೇರಿ ಮೂರು ಆನೆಗಳ ಸಾವು

ರಾಜಭಟ್ಖಾವಾ  ಮತ್ತು ಕಲ್ಚಿನಿ ರೈಲು ನಿಲ್ದಾಣಗಳ ನಡುವಿನ ಶಿಖಾರಿ ಗೇಟ್ ಬಳಿ ಬೆಳಗ್ಗೆ 7 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಒಂದು ಮರಿ ಮತ್ತು ಎರಡು ವಯಸ್ಕ ಆನೆಗಳು ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕೋಲ್ಕತ್ತಾ: ಪಶ್ಚಿಮ ಬಂಗಾಳದ  ಬಕ್ಸಾ ಹುಲಿ ಸಂರಕ್ಷಿತ ಅರಣ್ಯದಲ್ಲಿ ಗೂಡ್ಸ್ ರೈಲು  ಡಿಕ್ಕಿ ಹೊಡೆದ ಪರಿಣಾಮ 3 ಆನೆಗಳು ಸಾವನ್ನಪ್ಪಿವೆ.

ರಾಜಭಟ್ಖಾವಾ  ಮತ್ತು ಕಲ್ಚಿನಿ ರೈಲು ನಿಲ್ದಾಣಗಳ ನಡುವಿನ ಶಿಖಾರಿ ಗೇಟ್ ಬಳಿ ಬೆಳಗ್ಗೆ 7 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಒಂದು ಮರಿ ಮತ್ತು ಎರಡು ವಯಸ್ಕ ಆನೆಗಳು ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ.

ಅಲಿಪುರ್ದೌರ್ ಜಿಲ್ಲೆಯ ಹುಲಿ ಸಂರಕ್ಷಿತ ಪ್ರದೇಶದ ಪಶ್ಚಿಮ ರಾಜಭಟ್ಖಾವಾ ಶ್ರೇಣಿಯಲ್ಲಿ ಸಂಭವಿಸಿದ ಈ ಘಟನೆಯು ಭಾರತದಲ್ಲಿ ರೈಲು ಡಿಕ್ಕಿಯಿಂದ ಆನೆಗಳು ಸಾವನ್ನಪ್ಪುವ ಅನೇಕ ಸಾಮಾನ್ಯ ಘಟನೆಗಳಲ್ಲಿ ಒಂದಾಗಿದೆ.

ಈ ವರ್ಷದ ಆರಂಭದಲ್ಲಿ, ಪಶ್ಚಿಮ ಬಂಗಾಳದ ಅಲಿಪುರ್ದಾರ್ ಜಿಲ್ಲೆಯ ಚಪ್ರಮರಿ ಮೀಸಲು ಅರಣ್ಯದೊಳಗೆ ರೈಲು ಹಳಿ ದಾಟಲು ಪ್ರಯತ್ನಿಸುತ್ತಿದ್ದ ಗರ್ಭಿಣಿ ಆನೆ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. ಭಾರತದಲ್ಲಿ ಪ್ರತಿ ವರ್ಷ ಸರಾಸರಿ 20 ಆನೆಗಳು ರೈಲು ಡಿಕ್ಕಿಯಿಂದ ಸಾಯುತ್ತವೆ ಎಂದು ಸರ್ಕಾರದ ಅಂಕಿಅಂಶಗಳು ತೋರಿಸುತ್ತವೆ. ರೈಲು ಅಪಘಾತಗಳು ಪಶ್ಚಿಮ ಬಂಗಾಳದಲ್ಲಿ ಅಸ್ವಾಭಾವಿಕ ಆನೆಗಳ ಸಾವಿಗೆ ಒಂದು ಕಾರಣವಾಗಿದೆ ಮತ್ತು ಅದನ್ನು ತಡೆಯಲು ಸರ್ಕಾರವು ಕಠಿಣವಾಗಿ ಪ್ರಯತ್ನಿಸುತ್ತಿದೆ.

ಪಶ್ಚಿಮ ಬಂಗಾಳದ ಅಲಿಪುರ್‌ದಾರ್ ಜಿಲ್ಲೆಯ ರಾಜಭಟ್‌ಖಾವಾದಲ್ಲಿ ಅರಣ್ಯದ ಮೂಲಕ ಹಾದು ಹೋಗುತ್ತಿದ್ದ ಹಳಿಗಳನ್ನು ದಾಟುತ್ತಿದ್ದ ಮೂರು ಆನೆಗಳು ಸೋಮವಾರ ಗೂಡ್ಸ್ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿವೆ ಎಂದು ಉತ್ತರ ಗಡಿ ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  ರೈಲಿನ ಚಾಲಕ ಮತ್ತು ಸಹಾಯಕ ಚಾಲಕನ ವೈದ್ಯಕೀಯ ಪರೀಕ್ಷೆಯನ್ನು ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com