
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ರಾಷ್ಟ್ರಭತಿ ಭವನದಲ್ಲಿ ದೆಹಲಿ ಮುಖ್ಯ ಚುನಾವಣಾಧಿಕಾರಿ ಪಿ ಕೃಷ್ಣಮೂರ್ತಿ ಅವರಿಂದ ಬದಲಾದ ವಿಳಾಸದೊಂದಿಗೆ ಹೊಸ ಮತದಾರರ ಗುರುತಿನ ಚೀಟಿಯನ್ನು ಸ್ವೀಕರಿಸಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಮುರ್ಮು ಅವರು ಇದೀಗ ನವದೆಹಲಿಯ ಜಿಲ್ಲೆಯಿಂದ ಮುಂಬರುವ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ ಎಂದು ಸಿಇಒ ಕಚೇರಿಯ ಹೇಳಿಕೆ ತಿಳಿಸಿದೆ.
ಕೃಷ್ಣಮೂರ್ತಿ ಅವರು ತಮ್ಮ ಭೇಟಿಯ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ರಾಷ್ಟ್ರಪತಿಗಳಿಗೆ ತಿಳಿಸಿದ್ದರು.
ಮುರ್ಮು ಅವರ ಹಳೆಯ ಮತದಾರರ ಚೀಟಿಯಲ್ಲಿ ಅವರ ಒಡಿಶಾದ ಮಯೂರ್ಭಂಜ್ ವಿಳಾಸ ಇತ್ತು. ಇದೀಗ ಅದು ದೆಹಲಿಯ ವಿಳಾಸಕ್ಕೆ ಬದಲಾಗಿದೆ.
ದೆಹಲಿ ಸಿಇಒ ಈ ತಿಂಗಳ ಆರಂಭದಲ್ಲಿ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದು, ಅವರ ಮತದಾರರ ಗುರುತಿನ ಚೀಟಿಯಲ್ಲಿನ ವಿಳಾಸ ಬದಲಾವಣೆಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement