ಚುನಾವಣಾ ಆಯೋಗದ ಮುಂದೆ ಹಾಜರಾಗುತ್ತೇನೆ; ಎನ್‌ಸಿಪಿ ಸಂಸ್ಥಾಪಕರು ಯಾರೆಂಬುದು ಎಲ್ಲರಿಗೂ ತಿಳಿದಿದೆ: ಶರದ್ ಪವಾರ್

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ವಿಭಜನೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ತನ್ನ ನಿಲುವನ್ನು ತಿಳಿಸಲು ಅಕ್ಟೋಬರ್ 6ರಂದು ನವದೆಹಲಿಗೆ ಹೋಗುವುದಾಗಿ ಭಾನುವಾರ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
ಶರದ್ ಪವಾರ್
ಶರದ್ ಪವಾರ್
Updated on

ಪುಣೆ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ವಿಭಜನೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ತನ್ನ ನಿಲುವನ್ನು ತಿಳಿಸಲು ಅಕ್ಟೋಬರ್ 6ರಂದು ನವದೆಹಲಿಗೆ ಹೋಗುವುದಾಗಿ ಭಾನುವಾರ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜುನ್ನಾರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್, ಪಕ್ಷದ ಸಂಸ್ಥಾಪಕರು ಯಾರೆಂಬುದು ಎಲ್ಲರಿಗೂ ತಿಳಿದಿದೆ. ನನಗೆ ಸಮನ್ಸ್ ಸಿಕ್ಕಿದೆ ಮತ್ತು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದರು.

ಅಜಿತ್ ಪವಾರ್ ಮತ್ತು ಎಂಟು ಶಾಸಕರು ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಸರ್ಕಾರಕ್ಕೆ ಸೇರಿದ ನಂತರ ಜುಲೈ 2 ರಂದು ಶರದ್ ಪವಾರ್ ಸ್ಥಾಪಿಸಿದ ಎನ್‌ಸಿಪಿ ವಿಭಜನೆಯಾಯಿತು. ಇದೀಗ ಎರಡೂ ಬಣಗಳು ಪಕ್ಷದ ಹೆಸರು ಮತ್ತು ಚಿಹ್ನೆಗಾಗಿ ಭಾರತೀಯ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿವೆ.

'ಸಾಮಾನ್ಯರು ಏನು ಯೋಚಿಸುತ್ತಾರೆ ಎಂಬುದು ಮುಖ್ಯ. ಕೆಲವರು ವಿಭಿನ್ನ ರಾಜಕೀಯ ನಿಲುವು ತಳೆದಿದ್ದಾರೆ ಮತ್ತು ಪ್ರಜಾಪ್ರಭುತ್ವದಲ್ಲಿ ಅದು ಅವರ ಹಕ್ಕು ಎಂದು ನಾನು ಅದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಆದರೆ, ಮಹಾರಾಷ್ಟ್ರ ಮತ್ತು ದೇಶದ ಉಳಿದವರಿಗೆ ಎನ್‌ಸಿಪಿಯ ಸ್ಥಾಪಕರು ಯಾರು ಎಂಬುದು ತಿಳಿದಿದೆ. ಸದ್ಯದ ಪರಿಸ್ಥಿತಿ ನಮಗೆ ಅನುಕೂಲಕರವಾಗಿದೆ ಎಂದು ನನ್ನ ಜನರು ಹೇಳುವುದರಲ್ಲಿ ಸತ್ಯವಿದೆ' ಎಂದು ಶರದ್ ಪವಾರ್ ಹೇಳಿದ್ದಾರೆ.

ಬಿಜೆಪಿ ಜತೆ ಕೈಜೋಡಿಸಿರುವವರು ಎನ್‌ಸಿಪಿ ಸೇರಲು ಸಾಧ್ಯವಿಲ್ಲ, ನಾವು ರಾಜಿ ಮಾಡಿಕೊಳ್ಳುವುದನ್ನು ಒಪ್ಪಿಕೊಳ್ಳುವುದಿಲ್ಲ ಎಂದರು.

ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಮುಂದಿನ ನಡೆಯನ್ನು ಮುಂದಿನ ಕೆಲವು ದಿನಗಳಲ್ಲಿ ಅಂತಿಮಗೊಳಿಸಲಾಗುವುದು. ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಮತ್ತು 2024ರ ಲೋಕಸಭಾ ಚುನಾವಣೆಯ ನಂತರ ಅದು ಗೋಚರಿಸುತ್ತದೆ ಎಂದು ಪವಾರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com