ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ಸಂಸದ ಸಂಜಯ್ ಸಿಂಗ್ ಬಂಧನ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಬುಧವಾರ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದೆ. 
ಎಎಪಿ ಸಂಸದ ಸಂಜಯ್ ಸಿಂಗ್
ಎಎಪಿ ಸಂಸದ ಸಂಜಯ್ ಸಿಂಗ್
Updated on

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಬುಧವಾರ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದೆ. 

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಂದು ಬೆಳಗ್ಗೆ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು, ಸತತ 11 ಗಂಟೆಗಳ ವಿಚಾರಣೆ ಬಳಿಕ ಅವರನ್ನು ಬಂಧಿಸಿದೆ.

ಸಂಜಯ್ ಸಿಂಗ್ ಅವರು ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಎರಡನೇ ಎಎಪಿ ನಾಯಕರಾಗಿದ್ದಾರೆ. ಈ ಮುಂಚೆ ಇದೇ ಪ್ರಕರಣ ಸಂಬಂಧ ದೆಹಲಿ ಉಪ ಮುಖ್ಯಮಂತ್ರಿಯಾಗಿದ್ದ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ.

ಅಬಕಾರಿ ನೀತಿ ಹಗರಣದ ಸಂಬಂಧ ಜಾರಿ ನಿರ್ದೇಶನಾಲಯ ಅಥವಾ ಸಿಬಿಐ ದಾಖಲಿಸಿರುವ ಆರೋಪ ಪಟ್ಟಿಗಳಲ್ಲಿ ಸಂಜಯ್ ಸಿಂಗ್ ಅವರ ಹೆಸರು ಇಲ್ಲ. ಆದರೆ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿದಾರನಾಗಿರುವ ಆರೋಪಿ ಉದ್ಯಮಿ ದಿನೇಶ್ ಅರೋರಾ ಅವರು ಸಂಜಯ್ ಸಿಂಗ್ ಹೆಸರು ಪ್ರಸ್ತಾಪಿಸಿದ್ದರು. ಇದರ ಆಧಾರದಲ್ಲಿ ಇಡಿ ದಾಳಿ ನಡೆಸಿದೆ.

ಲಿಕ್ಕರ್ ನೀತಿಯಲ್ಲಿ ಲಾಬಿ ನಡೆಸಲು ಹಾಗೂ ಕಿಕ್ ಬ್ಯಾಕ್ ಚಟುವಟಿಕೆಗಳಲ್ಲಿ ಉದ್ಯಮಿ ದಿನೇಶ್ ಅರೋರಾ ಭಾಗಿಯಾಗಿದ್ದಾರೆ ಎಂದು ಇಡಿ ಆರೋಪಿಸಿದೆ.

ಕಳೆದ ಮೇ ತಿಂಗಳ ಆರಂಭದಲ್ಲಿ, ಸಂಜಯ್ ಸಿಂಗ್ ಅವರು ಹಣಕಾಸು ಕಾರ್ಯದರ್ಶಿ ಟಿ ವಿ ಸೋಮನಾಥನ್ ಅವರಿಗೆ ಬರೆದ ಪತ್ರವೊಂದರಲ್ಲಿ, ಇಡಿ ನಿರ್ದೇಶಕರು ಮತ್ತು ಸಹಾಯಕ ನಿರ್ದೇಶಕರು ಉದ್ದೇಶಪೂರ್ವಕವಾಗಿ ಯಾವುದೇ ಆಧಾರವಿಲ್ಲದೆ ಮದ್ಯ ಹಗರಣದಲ್ಲಿ ತಮ್ಮ ಹೆಸರನ್ನು ಸೇರಿಸಿದ್ದಾರೆ. ಈ ಮೂಲಕ ನನ್ನ ಗೌರವಕ್ಕೆ ಮತ್ತು ಪ್ರತಿಷ್ಠೆಗೆ ಧಕ್ಕೆ ಮಾಡಿದ್ದಾರೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com