ಕೊಚ್ಚಾಡಿಯನ್ ವಂಚನೆ ಪ್ರಕರಣ: ಸುಪ್ರೀಂ ಕೋರ್ಟ್ ನಲ್ಲಿ ರಜನಿಕಾಂತ್ ಪತ್ನಿಗೆ ಹಿನ್ನಡೆ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ  ದೀಪಿಕಾ ಪಡುಕೋಣೆ ಅಭಿನಯದ ಕೊಚ್ಚಾಡಿಯನ್ ಚಿತ್ರಕ್ಕೆ ಸಂಬಂಧಿಸಿದ ವಂಚನೆ ಪ್ರಕರಣದಲ್ಲಿ ಲತಾ ರಜನಿಕಾಂತ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ತೀವ್ರ ಹಿನ್ನಡೆಯಾಗಿದೆ.
ಲತಾ ರಜನಿಕಾಂತ್
ಲತಾ ರಜನಿಕಾಂತ್

ನವದೆಹಲಿ: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ  ದೀಪಿಕಾ ಪಡುಕೋಣೆ ಅಭಿನಯದ ಕೊಚ್ಚಾಡಿಯನ್ ಚಿತ್ರಕ್ಕೆ ಸಂಬಂಧಿಸಿದ ವಂಚನೆ ಪ್ರಕರಣದಲ್ಲಿ ಲತಾ ರಜನಿಕಾಂತ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ತೀವ್ರ ಹಿನ್ನಡೆಯಾಗಿದೆ.

ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಲತಾ ರಜನಿಕಾಂತ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಎಸ್ ಬೋಪಣ್ಣ ಮತ್ತು ಎಂಎಂ ಸುಂದ್ರೇಶ್ ಅವರ ಪೀಠ, ವಂಚನೆ ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ.

ತಮ್ಮ ವಿರುದ್ಧದ ವಂಚನೆ ಪ್ರಕರಣ ರದ್ದುಗೊಳಿಸುವಂತೆ ಲತಾ ರಜನಿಕಾಂತ್ ಅವರು ಮಾಡಿದ್ದ ಮನವಿಯನ್ನು ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ಎಂಎಂ ಸುಂದ್ರೇಶ್ ಅವರ ಪೀಠ ತಿರಸ್ಕರಿಸಿದೆ. ವಿಚಾರಣಾ ನ್ಯಾಯಾಲಯದಲ್ಲಿ ಪ್ರಕರಣ ರದ್ದು ಕೋರುವುದು ಅಥವಾ ವಿಚಾರಣೆ ಎದುರಿಸುವುದು ಲತಾ ರಜನಿಕಾಂತ್‌ಗೆ ಇರುವ ಏಕೈಕ ದಾರಿ ಎಂದು ಹೇಳಿದೆ.

ಲತಾ ರಜನಿಕಾಂತ್ ಅವರ ವಿರುದ್ಧದ ಆರೋಪಗಳನ್ನು ಮೌಲ್ಯಮಾಪನ ಮಾಡದೆ ಅವರ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಖಡಾಖಂಡಿತವಾಗಿ ಹೇಳಿದೆ.

ವಿಚಾರಣಾ ನ್ಯಾಯಾಲಯವು ಪ್ರಕರಣದ ಅರ್ಹತೆ ಮತ್ತು ಕಾನೂನಿನ ಪ್ರಕಾರ ಈ ಪ್ರಕರಣವನ್ನು ಪರಿಗಣಿಸಲು ನಿರ್ದೇಶಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ. ಆದರೆ, ನ್ಯಾಯಾಲಯ ನಿರ್ದೇಶನ ನೀಡದ ಹೊರತು ಲತಾ ರಜನಿಕಾಂತ್‌ ಅವರು ಬೆಂಗಳೂರಿನ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com