ಮೆಂಧಾರ್/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಸೇನಾ ಸಿಬ್ಬಂದಿಯೊಬ್ಬರು ತನ್ನದೇ ಆದ ಸೇವಾ ರೈಫಲ್ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಮೃತಪಾಲ್ ಸಿಂಗ್ ಮೃತಪಟ್ಟ ಯೋಧರಾಗಿದ್ದಾರೆ. ಅವರನ್ನು ಮಾನ್ಕೋಟೆ ಸೆಕ್ಟರ್ನಲ್ಲಿ ಫಾರ್ವರ್ಡ್ ಪೋಸ್ಟ್ಗೆ ನಿಯೋಜಿಸಲಾಯಿತು.
ಮುಂಜಾನೆ 5 ಗಂಟೆ ಸುಮಾರಿಗೆ ಗುಂಡೇಟಿನ ಸದ್ದು ಕೇಳಿದ ನಂತರ ಅವರ ಸಹೋದ್ಯೋಗಿಗಳು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿದ್ದಾರೆ. ಸಿಂಗ್ ತಮ್ಮದೇ ಆದ ಸರ್ವಿಸ್ ರೈಫಲ್ನಿಂದ ಗುಂಡೇಟಿನಿಂದ ಸಾವನ್ನಪ್ಪಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅವರು ಹೇಳಿದರು.
ಆಕಸ್ಮಿಕವಾಗಿ ಹಾರಿದ ಗುಂಡಿನಿಂದ ಅವರನ್ನು ಸಾವನ್ನಪ್ಪಿದ್ದಾರೆಯೇ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬುದರ ಕುರಿತು ತನಿಖೆಯಾಗಬೇಕಾಗಿದೆ. ಸತ್ಯಾಂಶ ತಿಳಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅವರು ತಿಳಿಸಿದರು.
Advertisement