ಔರಂಗಾಬಾದ್ ಸಮೃದ್ಧಿ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಫಘಾತ: ಕಂಟೈನರ್ ಗೆ ಮಿನಿ ಬಸ್ ಡಿಕ್ಕಿ; 12 ಸಾವು- 23 ಮಂದಿಗೆ ಗಾಯ

ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಮಿನಿ ಬಸ್ ಕಂಟೈನರ್‌ಗೆ ಡಿಕ್ಕಿ ಹೊಡೆದು 12 ಜನರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಔರಂಗಬಾದ್: ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಮಿನಿ ಬಸ್ ಕಂಟೈನರ್‌ಗೆ ಡಿಕ್ಕಿ ಹೊಡೆದು 12 ಜನರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಮುಂಜಾನೆ ವೇಗವಾಗಿ ಬಂದ ಮಿನಿ ಬಸ್ ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ, ಖಾಸಗಿ ಬಸ್‌ನಲ್ಲಿ 35 ಮಂದಿ  ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈನಿಂದ ಸುಮಾರು 350 ಕಿಮೀ ದೂರದಲ್ಲಿರುವ ಜಿಲ್ಲೆಯ ಎಕ್ಸ್‌ಪ್ರೆಸ್‌ವೇಯ ವೈಜಾಪುರ ಪ್ರದೇಶದಲ್ಲಿ ಮಧ್ಯರಾತ್ರಿ 12.30 ರ ಸುಮಾರಿಗೆ ಅಪಘಾತ ಸಂಭವಿಸಿದೆ . ಬಸ್ ಚಾಲಕ  ನಿಯಂತ್ರಣ ಕಳೆದುಕೊಂಡಿದ್ದಾನೆ. ಇದರಿಂದ ಕಂಟೇನರ್‌ಗೆ ಹಿಂಬದಿಯಿಂದ ಬಂದು ಬಸ್ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹನ್ನೆರಡು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಐವರು ಪುರುಷರು, ಆರು ಮಹಿಳೆಯರು ಮತ್ತು ಓರ್ವ ಅಪ್ರಾಪ್ತ ಬಾಲಕಿ ಸೇರಿದ್ದಾರೆ ಎಂದು ಅವರು ತಿಳಿಸಿದ್ದಾರೆ. 23 ಮಂದಿ ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com