ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಓರ್ವ ನಕ್ಸಲ್ ಹತ, ಎಕೆ-47 ರೈಫಲ್ ವಶಕ್ಕೆ

ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರಾತಾ ಪಡೆಗಳು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಭದ್ರತಾ ಪಡೆಗಳು ಓರ್ವ ನಕ್ಸಲ್ ಹತನಾಗಿದ್ದಾನೆಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರಾತಾ ಪಡೆಗಳು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಭದ್ರತಾ ಪಡೆಗಳು ಓರ್ವ ನಕ್ಸಲ್ ಹತನಾಗಿದ್ದಾನೆಂದು ತಿಳಿದುಬಂದಿದೆ.

ಮಡ್ಡೆದ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ಬಂದೆಪರಾ ಗ್ರಾಮದ ಸಮೀಫದ ಅರಣ್ಯ ಪ್ರದೇಶದಲ್ಲಿ ಇಂದು ಬೆಳಿಗ್ಗೆ ವಿವಿಧ ಭದ್ರತಾ ಪಡೆಗಳು ಜಂಟಿಯಾಗಿ ನಕ್ಸಲ್‌ ವಿರೋಧಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದವು. ಆ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಬಸ್ತಾರ್ ವಲಯದ ಐಜಿಪಿ ಸುಂದರ್‌ರಾಜ್‌ ಪಿ. ಹೇಳಿದ್ದಾರೆ.

ಜಿಲ್ಲಾ ಮೀಸಲು ಪಡೆ, ಬಸ್ತಾರ್‌ ಫೈಟರ್‌, ಪೊಲೀಸರು, ವಿಶೇಷ ಕಾರ್ಯಪಡೆ ಹಾಗೂ ಕೇಂದ್ರೀಯ ಮೀಸಲು ಪೊಲೀಸ್‌ ಪಡೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು.

ಹತ್ಯೆಯಾದವನ ಗುರುತು ಇನ್ನೂ ಪತ್ತೆಯಾಗಿಲ್ಲ. ಎಕೆ-47 ರೈಫಲ್ ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದೂ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com