ಕಾಕಿನಾಡ: ಕಾಕಿನಾಡ ಜಿಲ್ಲೆಯ ಗೌತಮಿ-ಗೋದಾವರಿ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದು, ಮೃತದೇಹಗಳನ್ನು ಭಾನುವಾರ ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ಸಂಜೆ 4.30ರ ಸುಮಾರಿಗೆ ತಲ್ಲರೇವು ಮಂಡಲದ ಪಿಳ್ಳಂಕ ಗ್ರಾಮದಲ್ಲಿ ಏಳು ವಿದ್ಯಾರ್ಥಿಗಳು ಈಜುವ ಉದ್ದೇಶದಿಂದ ಗೋದಾವರಿ ನದಿಗೆ ಇಳಿದಿದ್ದಾರೆ. ಅವರಲ್ಲಿ ನಾಲ್ವರು ನೀರಿನಲ್ಲಿ ಮುಳುಗಿದ್ದು, ಭಾನುವಾರ ಬೆಳಗ್ಗೆ ಅವರ ಮೃತದೇಹಗಳು ಪತ್ತೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಉಳಿದ ಮೂವರು ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ಪದವಿಪೂರ್ವ ಕೋರ್ಸ್ಗಳನ್ನು ಓದುತ್ತಿದ್ದರು ಮತ್ತು ಎಲ್ಲರೂ 20 ವರ್ಷದವರು. ಪಶ್ಚಿಮ ಗೋದಾವರಿ ಜಿಲ್ಲೆಯ ತನುಕು ಪಟ್ಟಣಕ್ಕೆ ಸೇರಿದ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಬಂದಿದ್ದರು. ಅವರು ಮೊದಲು ಹತ್ತಿರದ ಯಾನಂಗೆ ಹೋಗಿ ನಂತರ ಪಿಳ್ಳಂಕಕ್ಕೆ ಬಂದಿದ್ದರು.
ಪೊಲೀಸರ ಪ್ರಕಾರ, ನಾಲ್ವರು ವಿದ್ಯಾರ್ಥಿಗಳು ಈಜುತ್ತಿದ್ದಾಗ ಬಲವಾದ ಪ್ರವಾಹಕ್ಕೆ ಸಿಲುಕಿದ್ದಾರೆ ಮತ್ತು ಹಲವಾರು ಗಂಟೆಗಳ ನಂತರ ಅವರ ಮೃತದೇಹಗಳನ್ನು ಹೊರತೆಗೆಯಲಾಯಿತು.
ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್), ಅಗ್ನಿಶಾಮಕ, ಕಂದಾಯ ಮತ್ತು ಪೊಲೀಸ್ ಇಲಾಖೆಗಳು ಮತ್ತು ಮೀನುಗಾರರು ಶೋಧ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಪೊಲೀಸರು ಸಿಆರ್ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Advertisement