ರಾಜಸ್ಥಾನ: ಕಾಂಗ್ರೆಸ್ ನಾಯಕ ಸುರೇಶ್ ಮಿಶ್ರಾ ಸೇರಿದಂತೆ 8 ಮಂದಿ ಬಿಜೆಪಿಗೆ ಸೇರ್ಪಡೆ

ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿಯಿರುವಂತೆಯೇ  ಕಾಂಗ್ರೆಸ್ ನಾಯಕ  ಸುರೇಶ್ ಮಿಶ್ರಾ, ನಿವೃತ್ತ ಐಎಎಸ್ ಅಧಿಕಾರಿ ಅಂತರ್ ಸಿಂಗ್ ನೆಹ್ರಾ ಸೇರಿದಂತೆ 10 ಮಂದಿ ಸೋಮವಾರ ಬಿಜೆಪಿಗೆ ಸೇರ್ಪಡೆಯಾದರು. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿಯಿರುವಂತೆಯೇ  ಕಾಂಗ್ರೆಸ್ ನಾಯಕ  ಸುರೇಶ್ ಮಿಶ್ರಾ, ನಿವೃತ್ತ ಐಎಎಸ್ ಅಧಿಕಾರಿ ಅಂತರ್ ಸಿಂಗ್ ನೆಹ್ರಾ ಸೇರಿದಂತೆ 10 ಮಂದಿ ಸೋಮವಾರ ಬಿಜೆಪಿಗೆ ಸೇರ್ಪಡೆಯಾದರು. 

2008 ರ ವಿಧಾನಸಭಾ ಚುನಾವಣೆಯಲ್ಲಿ ಜೈಪುರದ ಸಂಗನೇರ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಸುರೇಶ್ ಮಿಶ್ರಾ ರಾಜ್ಯಾಧ್ಯಕ್ಷ ಸಿಪಿ ಜೋಶಿ ಮತ್ತಿತರರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಅವರು 2008-ಚುನಾವಣೆಯಲ್ಲಿ ಬಿಜೆಪಿಯ ಘನಶ್ಯಾಮ್ ತಿವಾರಿ ವಿರುದ್ಧ 32,912 ಮತಗಳ ಅಂತರದಿಂದ ಸೋತಿದ್ದರು. ಇದೇ ವೇಳೆ ಜೈಪುರ ಜಿಲ್ಲಾಧಿಕಾರಿಯಾಗಿದ್ದ ನೆಹ್ರಾ ಕೂಡಾ ಕೇಸರಿ ಪಕ್ಷ ಸೇರಿದರು. 

ನಾಗೌರ್‌ನ ಹನುಮಾನ್ ಬೇನಿವಾಲ್ ಅವರ ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷದ ಕೆಲವು ಸ್ಥಳೀಯ ನಾಯಕರು ಕೂಡಾ ಕೇಸರಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com