ಹಳಿ ದಾಟುತ್ತಿದ್ದ ವೇಳೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ತಾಯಿ, ಇಬ್ಬರು ಹೆಣ್ಣು ಮಕ್ಕಳು ಸಾವು!

ಮೀರತ್ ಜಿಲ್ಲೆಯ ಲೆವೆಲ್ ಕ್ರಾಸಿಂಗ್‌ನಲ್ಲಿ ಹಳಿ ದಾಟುತಿದ್ದ ವೇಳೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ 40 ವರ್ಷದ ಮಹಿಳೆ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು ಭಾನುವಾರ ರಾತ್ರಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಂದೇ ಭಾರತ್ ಎಕ್ಸ್‌ಪ್ರೆಸ್
ವಂದೇ ಭಾರತ್ ಎಕ್ಸ್‌ಪ್ರೆಸ್

ಮೀರತ್: ಜಿಲ್ಲೆಯ ಲೆವೆಲ್ ಕ್ರಾಸಿಂಗ್‌ನಲ್ಲಿ ಹಳಿ ದಾಟುತಿದ್ದ ವೇಳೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ 40 ವರ್ಷದ ಮಹಿಳೆ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು ಭಾನುವಾರ ರಾತ್ರಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಸಂಪುರದ ಲೆವೆಲ್ ಕ್ರಾಸಿಂಗ್‌ನ ಗೇಟ್‌ಗಳನ್ನು ಮುಚ್ಚಿದ್ದರೂ, ಮೂವರು ಹಳಿಗಳನ್ನು ದಾಟಲು ಮುಂದಾದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ) ಪಿಯೂಷ್ ಕುಮಾರ್ ಸಿಂಗ್ ಹೇಳಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನರೇಶ್ ಗಾಡಿಯನ್ನು ಕೈಯಿಂದ ಎಳೆಯುತ್ತಿದ್ದರೆ, ಅವರ ಪತ್ನಿ ಮೋನಾ ಮತ್ತು ಅವರ ಪುತ್ರಿಯರಾದ ಮನಿಶಾ (14) ಮತ್ತು ಚಾರು (7) ಗಾಡಿಯ ಹಿಂಬದಿಯಲ್ಲಿ ಕುಳಿತಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 

ಕಾಸಂಪುರದ ರೈಲ್ವೆ ಕ್ರಾಸಿಂಗ್‌ ಬಳಿ ಹಳಿ ದಾಟುತ್ತಿದ್ದಾಗ ಸೆಮಿ-ಹೈಸ್ಪೀಡ್ ರೈಲು ಗಾಡಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಮೋನಾ ಮತ್ತು ಆಕೆಯ ಇಬ್ಬರು ಪುತ್ರಿಯರು ಹಳಿಯ ಮೇಲೆ ಬಿದ್ದಿದ್ದಾರೆ. ಅವರ ಮೇಲೆ ರೈಲು ಹರಿದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com