ಅಮಿತ್ ಮಾಳವಿಯಾ
ಅಮಿತ್ ಮಾಳವಿಯಾ

ಉದಯನಿಧಿ ಸ್ಟಾಲಿನ್ ಹೇಳಿಕೆ ತಿರುಚಿದ ಆರೋಪ: ತಮಿಳುನಾಡಿನಲ್ಲಿ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲು

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪುತ್ರ ಮತ್ತು ರಾಜ್ಯ ಯುವ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಹೇಳಿಕೆಯನ್ನು ತಿರುಚಿದ ಆರೋಪವನ್ನು ಬಿಜೆಪಿ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
Published on

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪುತ್ರ ಮತ್ತು ರಾಜ್ಯ ಯುವ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಹೇಳಿಕೆಯನ್ನು ತಿರುಚಿದ ಆರೋಪವನ್ನು ಬಿಜೆಪಿ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ವಾಸ್ತವವಾಗಿ, ಅಮಿತ್ ಮಾಳವಿಯಾ ಅವರು ಎಕ್ಸ್ (ಟ್ವಿಟ್ಟರ್) ನಲ್ಲಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಗ್ಯೂಗೆ ಹೋಲಿಸಿದ್ದಾರೆ. ಅಲ್ಲದೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದು ಈ ಮೂಲಕ ಸನಾತನ ಧರ್ಮದಲ್ಲಿ ನಂಬಿಕೆಯಿರುವ ಭಾರತದ 80 ಪ್ರತಿಶತ ಜನಸಂಖ್ಯೆಯ ನರಮೇಧಕ್ಕಾಗಿ ಅವರು ಮನವಿ ಮಾಡುತ್ತಿದ್ದಾರೆ. ಡಿಎಂಕೆ ವಿರೋಧ ಗುಂಪಿನ ಪ್ರಮುಖ ಸದಸ್ಯ ಮತ್ತು ಕಾಂಗ್ರೆಸ್‌ನ ದೀರ್ಘಕಾಲೀನ ಮಿತ್ರ ಪಕ್ಷವಾಗಿದೆ. ಮುಂಬೈ ಸಭೆಯಲ್ಲಿ ಇದನ್ನು ಒಪ್ಪಲಾಗಿದೆಯೇ? ಎಂದು ಟ್ವೀಟಿಸಿದ್ದರು.

ದೂರಿನ ನಂತರ ಮಾಳವಿಯಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿರುಚಿರಾಪಳ್ಳಿ ಪೊಲೀಸರು ತಿಳಿಸಿದ್ದಾರೆ. ಮಾಳವಿಯಾ ವಿರುದ್ಧ ಐಪಿಸಿಯ 4 ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇವುಗಳಲ್ಲಿ 153, 153 (A), 504, 504 (1) (B) ಸೇರಿವೆ. ಡಿಎಂಕೆ ಅಡ್ವೊಕೇಟ್ ವಿಭಾಗದ ಕೆಎವಿ ದಿನಕರನ್ ದೂರು ದಾಖಲಿಸಿದ್ದಾರೆ. ಸನಾತನ ಧರ್ಮದ ಹೇಳಿಕೆಗೆ ಸಂಬಂಧಿಸಿದಂತೆ ಉದಯನಿಧಿ ಸ್ಟಾಲಿನ್ ಸ್ಪಷ್ಟನೆ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಇದರ ಹೊರತಾಗಿಯೂ, ರಾಜಕೀಯ ಉದ್ದೇಶಕ್ಕಾಗಿ, ಎರಡು ಗುಂಪುಗಳ ನಡುವೆ ಹಿಂಸಾಚಾರ ಮತ್ತು ದ್ವೇಷವನ್ನು ಪ್ರಚೋದಿಸಲು ಮತ್ತು ಕೋಮು ಸೌಹಾರ್ದವನ್ನು ದುರ್ಬಲಗೊಳಿಸಲು ಅಮಿತ್ ಮಾಳವೀಯ ಅವರು ಸಚಿವರ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ತಿರುಚಿದ್ದಾರೆ ಎಂದು ಆರೋಪಿಸಿದ್ದಾರೆ.

ಮಾಳವಿಯಾ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಉದಯನಿಧಿ, ಸನಾತನ ಧರ್ಮವನ್ನು ಅನುಸರಿಸುವ ಜನರ ನರಮೇಧದ ಬಗ್ಗೆ ನಾನು ಎಂದಿಗೂ ಮಾತನಾಡಿಲ್ಲ ಎಂದು ಹೇಳಿದ್ದರು. ಸನಾತನ ಧರ್ಮವು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ತತ್ವವಾಗಿದೆ. ಸನಾತನ ಧರ್ಮವನ್ನು ಬೇರು ಸಮೇತ ಕಿತ್ತೊಗೆಯುವುದೆಂದರೆ ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಕಾಪಾಡುವುದು. ಅವರು ಹೇಳುವ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತಾರೆ. ನಾನು ಸನಾತನ ಧರ್ಮದಿಂದ ಬಳಲುತ್ತಿರುವ ತುಳಿತಕ್ಕೊಳಗಾದ ಮತ್ತು ಅಂಚಿನಲ್ಲಿರುವ ಜನರ ಪರವಾಗಿ ಮಾತನಾಡಿದ್ದೇನೆ ಎಂದರು.

ಕಳೆದ ವಾರ ಉದಯನಿಧಿ ಅವರು ಸನಾತನ ಸಂಸ್ಥೆಯನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಇದು ಡೆಂಗ್ಯೂ ಜ್ವರ ಮತ್ತು ಮಲೇರಿಯಾದಂತೆ. ಇದು ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದರು. ಡಿಎಂಕೆ ನಾಯಕನ ಈ ಹೇಳಿಕೆ ನಂತರ ರಾಜಕೀಯ ಬಿರುಗಾಳಿ ಎದ್ದಿತ್ತು. ಡಿಎಂಕೆ ಈ ಮೈತ್ರಿಕೂಟದ ಭಾಗವಾಗಿರುವ ಕಾರಣ ಬಿಜೆಪಿ ನೇರವಾಗಿ INDIA ಮೈತ್ರಿಯನ್ನು ಗುರಿಯಾಗಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com