ರಾಜ್ಯಪಾಲರನ್ನು ಭೇಟಿ ಮಾಡಿದ ತಮಿಳುನಾಡು ಬಿಜೆಪಿ: ಸಂಪುಟದಿಂದ ಉದಯನಿಧಿ ವಜಾಗೊಳಿಸಲು ಆಗ್ರಹ 

ರಾಜ್ಯಪಾಲರನ್ನು ಭೇಟಿ ಮಾಡಿದ ತಮಿಳುನಾಡು ಬಿಜೆಪಿ: ಸಂಪುಟದಿಂದ ಉದಯನಿಧಿ ವಜಾಗೊಳಿಸಲು ಆಗ್ರಹ 
ರಾಜ್ಯಪಾಲರನ್ನು ಭೇಟಿ ಮಾಡಿದ ತಮಿಳುನಾಡು ಬಿಜೆಪಿ
ರಾಜ್ಯಪಾಲರನ್ನು ಭೇಟಿ ಮಾಡಿದ ತಮಿಳುನಾಡು ಬಿಜೆಪಿ

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಸನಾತನ ಧರ್ಮದ ನಿರ್ಮೂಲನೆ ಬಗ್ಗೆ ಹೇಳಿಕೆ ನೀಡಿದ್ದ ಸಚಿವ ಉದಯನಿಧಿ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿದ್ದಾರೆ. 

ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಪ್ರಕಾರ ಸಚಿವರ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ನೀಡಬೇಕೆಂದು ರಾಜ್ಯಪಾಲ ಆರ್ ಎನ್ ರವಿ ಅವರಿಗೆ ತಮಿಳುನಾಡು ಬಿಜೆಪಿ ನಿಯೋಗ ಮನವಿ ಮಾಡಿದೆ.  ಇದೇ ವೇಳೆ, ಸನಾತನ ಧರ್ಮ ನಿರ್ಮೂಲನೆಗೆ ಸಂಬಂಧಿಸಿದ ಕಾನ್ಫರೆನ್ಸ್ ನಲ್ಲಿ  ಸಚಿವ ಪಿಕೆ ಶೇಖರ್ ಬಾಬು ಭಾಗಿಯಾಗಿದ್ದು ಪ್ರಮಾಣ ವಚನಕ್ಕೆ ವಿರುದ್ಧವಾಗಿದ್ದು ಅವರನ್ನೂ ಸಂಪುಟದಿಂದ ವಜಾಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂದರೆ ಅದು ಹಿಂದೂ ಧರ್ಮದ ನಿರ್ಮೂಲನೆ ಎಂದಾಗುತ್ತದೆ. ಈ ರೀತಿಯ ಹೇಳಿಕೆ ನೀಡಿರುವ ಉದಯನಿಧಿ ಸ್ಟ್ಯಾಲಿನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದು ಬಿಜೆಪಿ ನಾಯಕ ಕರು ನಾಗರಾಜನ್ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com