ಜಿ-20: ಭಾರತ-ಮಧ್ಯಪ್ರಾಚ್ಯ-ಯುರೋಪ್ ಸಂಪರ್ಕ ಕಾರಿಡಾರ್ ಘೋಷಣೆ

ಭಾರತ-ಮಧ್ಯಪ್ರಾಚ್ಯ-ಯುರೋಪ್ ಎಕನಾಮಿಕ್ ಕಾರಿಡಾರ್ ನ ಯೋಜನೆಗಳ ಕುರಿತ ಮಾಹಿತಿಯನ್ನು ಪ್ರಧಾನಿ ಮೋದಿ ಜಿ-20 ಶೃಂಗಸಭೆಯ ವೇಳೆ ಹಂಚಿಕೊಂಡಿದ್ದಾರೆ.
ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
Updated on

ನವದೆಹಲಿ: ಭಾರತ-ಮಧ್ಯಪ್ರಾಚ್ಯ-ಯುರೋಪ್ ಎಕನಾಮಿಕ್ ಕಾರಿಡಾರ್ ನ ಯೋಜನೆಗಳ ಕುರಿತ ಮಾಹಿತಿಯನ್ನು ಪ್ರಧಾನಿ ಮೋದಿ ಜಿ-20 ಶೃಂಗಸಭೆಯ ವೇಳೆ ಹಂಚಿಕೊಂಡಿದ್ದಾರೆ.

ಭಾರತವು ಸಂಪರ್ಕವನ್ನು ಪ್ರಾದೇಶಿಕ ಗಡಿಗಳಿಗೆ ಸೀಮಿತಗೊಳಿಸುವುದಿಲ್ಲ ಮತ್ತು ಪರಸ್ಪರ ನಂಬಿಕೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ನಂಬುತ್ತದೆ ಎಂದು ಮೋದಿ ಹೇಳಿದ್ದಾರೆ.

G20 ಶೃಂಗಸಭೆಯಲ್ಲಿ 'ಜಾಗತಿಕ ಮೂಲಸೌಕರ್ಯ ಮತ್ತು ಹೂಡಿಕೆಗಾಗಿ ಪಾಲುದಾರಿಕೆ' ಮತ್ತು 'ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್' ಉದ್ಘಾಟನಾ ಸಮಾರಂಭದಲ್ಲಿ ಮೋದಿ ಇಂದು "ನಾವೆಲ್ಲರೂ ಪ್ರಮುಖ ಮತ್ತು ಐತಿಹಾಸಿಕ ಪಾಲುದಾರಿಕೆಯನ್ನು ತಲುಪಿದ್ದೇವೆ" ಎಂದು ಹೇಳಿದರು.

ಮುಂಬರುವ ದಿನಗಳಲ್ಲಿ ಭಾರತ, ಮಧ್ಯಪ್ರಾಚ್ಯ ಮತ್ತು ಯುರೋಪ್‌ನ ಆರ್ಥಿಕ ಏಕೀಕರಣಕ್ಕೆ ಇದು ಪರಿಣಾಮಕಾರಿ ಮಾಧ್ಯಮವಾಗಲಿದೆ ಎಂದರು. "ಇದು ಇಡೀ ಪ್ರಪಂಚದ ಸಂಪರ್ಕ ಮತ್ತು ಸುಸ್ಥಿರ ಅಭಿವೃದ್ಧಿಗೆ ಹೊಸ ದಿಕ್ಕನ್ನು ನೀಡುತ್ತದೆ" ಎಂದು ಪ್ರಧಾನಿ ಹೇಳಿದರು. ಬಲವಾದ ಸಂಪರ್ಕ ಮತ್ತು ಮೂಲಸೌಕರ್ಯವು ಮಾನವೀಯತೆಗೆ ಮೂಲಭೂತ ಆಧಾರವಾಗಿದೆ ಮತ್ತು ಭಾರತವು ಯಾವಾಗಲೂ ಇದಕ್ಕೆ ಬಲವಾದ ಒತ್ತು ನೀಡಿದೆ ಎಂದು ಪ್ರಧಾನಿ ಹೇಳಿದ್ದಾರೆ.

"ನಾವು ಅಭಿವೃದ್ಧಿ ಹೊಂದಿದ ಭಾರತಕ್ಕೆ ಬಲವಾದ ಅಡಿಪಾಯವನ್ನು ಹಾಕುತ್ತಿದ್ದೇವೆ. PGII (ಜಾಗತಿಕ ಮೂಲಸೌಕರ್ಯ ಮತ್ತು ಹೂಡಿಕೆಗಾಗಿ ಪಾಲುದಾರಿಕೆ), ಜಾಗತಿಕ ದಕ್ಷಿಣ ದೇಶಗಳಲ್ಲಿ ಮೂಲಸೌಕರ್ಯ ಅಂತರವನ್ನು ತುಂಬುವಲ್ಲಿ ನಾವು ಪ್ರಮುಖ ಪಾತ್ರ ವಹಿಸಬಹುದು. ಭಾರತವು ಪ್ರಾದೇಶಿಕ ಗಡಿಗಳಿಗೆ ಸಂಪರ್ಕವನ್ನು ಮಿತಿಗೊಳಿಸುವುದಿಲ್ಲ. ಸಂಪರ್ಕವನ್ನು ನಾವು ನಂಬುತ್ತೇವೆ. ಪರಸ್ಪರ ನಂಬಿಕೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಬಹುದು, ”ಎಂದು ಪ್ರಧಾನಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com