ಒಡಿಶಾ ಸಿಎಂ ನವೀನ್ ಪಟ್ನಾಯಕ್
ಒಡಿಶಾ ಸಿಎಂ ನವೀನ್ ಪಟ್ನಾಯಕ್

ರಾಷ್ಟ್ರಪತಿಗಳ ಜಿ20 ಔತಣಕೂಟಕ್ಕೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಗೈರು!

ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ರಾತ್ರಿ ಆಯೋಜಿಸಿರುವ ಜಿ-20 ಶೃಂಗಸಭೆಯ ಔತಣಕೂಟದಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪಾಲ್ಗೊಳ್ಳುತ್ತಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ರಾತ್ರಿ ಆಯೋಜಿಸಿರುವ ಜಿ-20 ಶೃಂಗಸಭೆಯ ಔತಣಕೂಟದಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪಾಲ್ಗೊಳ್ಳುತ್ತಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಪಟ್ನಾಯಕ್  ಈ ಔತಣಕೂಟದಲ್ಲಿ ಗೈರಾಗಲು ಹಿಂದಿರುವ ಯಾವುದೇ ಕಾರಣವನ್ನು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿಲ್ಲ.

ಒಡಿಶಾದ ಆಡಳಿತಾರೂಢ ಬಿಜೆಡಿಯ ಅಧ್ಯಕ್ಷರೂ ಆಗಿರುವ ಪಟ್ನಾಯಕ್ ಅವರು ಮುಂದಿನ ವರ್ಷ ಏಕಕಾಲದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಗಳ ಮುಖ್ಯಮಂತ್ರಿಗಳು ಅಲ್ಲದೇ, ಕೇಂದ್ರ ಸರ್ಕಾರದ ಎಲ್ಲಾ ಕ್ಯಾಬಿನೆಟ್ ಮತ್ತು ರಾಜ್ಯ ಸಚಿವರು ಮತ್ತು ಕಾರ್ಯದರ್ಶಿಗಳನ್ನು ರಾಷ್ಟ್ರಪತಿಗಳು ಔತಣಕೂಟಕ್ಕೆ ಆಹ್ವಾನಿಸಿದ್ದಾರೆ. ದೆಹಲಿಯ ಪ್ರಗತಿ ಮೈದಾನದ ಭಾರತ ಮಂಟಪದಲ್ಲಿರುವ ಇಂಡಿಯಾ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್ ಕಾಂಪ್ಲೆಕ್ಸ್‌ನ ಮಲ್ಟಿ ಫಂಕ್ಷನ್ ಹಾಲ್‌ನಲ್ಲಿ ಔತಣಕೂಟ ನಡೆಯಲಿದೆ. 

Related Stories

No stories found.

Advertisement

X
Kannada Prabha
www.kannadaprabha.com