ದೇವಸ್ಥಾನದಿಂದ ಹಿಂದಿರುಗುವಾಗ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ದಾರುಣ ಸಾವು

ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಸೋಮವಾರ ಬಸ್‌ಗೆ ಕಾರು ಡಿಕ್ಕಿ ಹೊಡೆ‌ದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜೈಪುರ: ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಸೋಮವಾರ ಬಸ್‌ಗೆ ಕಾರು ಡಿಕ್ಕಿ ಹೊಡೆ‌ದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇವರೆಲ್ಲರೂ, ಧೋಲಾಪುರ ಜಿಲ್ಲೆಯ ಸಿಕರ್‌ನಲ್ಲಿರುವ ಶ್ಯಾಮ್‌ಜಿ ದೇಗುಲಕ್ಕೆ ಭೇಟಿ ನೀಡಿ ಮರಳುತ್ತಿದ್ದರು. ತಡರಾತ್ರಿ 1 ಗಂಟೆ ವೇಳೆಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ 2 ಗೂಳಿಗಳ ಶವಗಳೂ ಕೂಡ ಪತ್ತೆಯಾಗಿದ್ದು, ಗೂಳಿಗಳ ಕಾಳಗದಿಂದಾಗಿ ಅಪಘಾತ ಸಂಭವಿಸಿದೆ ಎಂದು ಮಾಹಿತಿ ನೀಡಿದ್ದಾರೆ. ಡಿಕ್ಕಿಯಾದ ಪರಿಣಾಮ ಕಾರು ಪರಿಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಮೃತರನ್ನು ಹರೇಂದ್ರ ಸಿಂಗ್ (32), ಅವರ ಪತ್ನಿ ಮಮತಾ (30), ಅವರ ಮಗಳು ಜಾನ್ವಿ (6), ಮಮತಾ ಅವರ ಸಹೋದರಿ ಸುಧಾ (35), ಅವರ ಪತಿ ಸಂತೋಷ್ (37) ಮತ್ತು ಅವರ ಮಗ ಅನುಜ್ (5) ಎಂದು ಗುರುತಿಸಲಾಗಿದೆ.

ಪೊಲೀಸ್‌ ಠಾಣೆಯ ಬಳಿಯೇ ಅಪಘಾತ ಸಂಭವಿಸಿದ್ದು, ತಕ್ಷಣವೇ ಪೊಲೀಸರು ಸ್ಥಳಕ್ಕೆ ಧಾವಿಸಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆರು ಮಂದಿ ಆಸ್ಪತ್ರೆಗೆ ಬರುವಾಗಲೇ ಮೃತ ಪಟ್ಟಿದ್ದರು

ಇಬ್ಬರು ಅಪ್ರಾಪ್ತರು ಗಾಯಗಳೊಂದಿಗೆ ಪಾರಾಗಿದ್ದು, ಮಗುವೊಂದು ಯಾವುದೇ ಗಾಯಗಳಿಲ್ಲದೆ ಪಾರಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆ ಮಾಡಿ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com