'ಸನಾತನ ಧರ್ಮ ನಿರ್ಮೂಲನೆಗಾಗಿಯೇ ಇಂಡಿಯಾ ಒಕ್ಕೂಟ ರಚನೆ': ತಮಿಳುನಾಡು ಸಚಿವ ಪೊನ್ಮುಡಿ ವಿವಾದ

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಕುರಿತ ಹೇಳಿಕೆ ವ್ಯಾಪಕ ವಿರೋಧಕ್ಕೆ ಗ್ರಾಸವಾಗಿರುವಂತೆಯೇ ಅದೇ ಪಕ್ಷದ ಮತ್ತೋರ್ವ ನಾಯಕ ಸನಾತನ ಧರ್ಮ ನಿರ್ಮೂಲನೆಗಾಗಿಯೇ ಇಂಡಿಯಾ ಒಕ್ಕೂಟ ರಚನೆಯಾಗಿದೆ ಎಂದು ಹೇಳಿ ವಿವಾದಕ್ಕೆ ಗ್ರಾಸವಾಗಿದ್ದಾರೆ.
ತಮಿಳುನಾಡು ಸಚಿವ ಪೊನ್ಮುಡಿ
ತಮಿಳುನಾಡು ಸಚಿವ ಪೊನ್ಮುಡಿ

ಚೆನ್ನೈ: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಕುರಿತ ಹೇಳಿಕೆ ವ್ಯಾಪಕ ವಿರೋಧಕ್ಕೆ ಗ್ರಾಸವಾಗಿರುವಂತೆಯೇ ಅದೇ ಪಕ್ಷದ ಮತ್ತೋರ್ವ ನಾಯಕ ಸನಾತನ ಧರ್ಮ ನಿರ್ಮೂಲನೆಗಾಗಿಯೇ ಇಂಡಿಯಾ ಒಕ್ಕೂಟ ರಚನೆಯಾಗಿದೆ ಎಂದು ಹೇಳಿ ವಿವಾದಕ್ಕೆ ಗ್ರಾಸವಾಗಿದ್ದಾರೆ.

ಹೌದು... ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ಹೇಳಿಕೆ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಅದೇ ಪಕ್ಷದ ಸಂಸದ ಎ ರಾಜಾ ಅವರ ಹೇಳಿಕೆಯನ್ನು ಬೆಂಬಲಿಸಿದ್ದರು. ಇದೀಗ ಈಗ ಮತ್ತೊಬ್ಬ ಸಚಿವರೂ ಸನಾತನ ಧರ್ಮದ ನಿರ್ಮೂಲನೆ ಬಗ್ಗೆ ಮಾತನಾಡಿರುವುದು ಉರಿವ ಬೆಂಕಿಗೆ ತುಪ್ಪ ಸುರಿದಂತೆ ಆಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com