ಜಮ್ಮು-ಕಾಶ್ಮೀರ: ಆಳವಾದ ಕಮರಿಗೆ ಉರುಳಿದ ಟ್ರಕ್, ನಾಲ್ಕು ಮಂದಿ ದಾರುಣ ಸಾವು

ಮಂಗಳವಾರ ಮುಂಜಾನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತದಿಂದ ಟ್ರಕ್ ಆಳವಾದ ಕಮರಿಗೆ ಉರುಳಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಜಮ್ಮು: ಮಂಗಳವಾರ ಮುಂಜಾನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತದಿಂದ ಟ್ರಕ್ ಆಳವಾದ ಕಮರಿಗೆ ಉರುಳಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಜಾನೆ 5 ಗಂಟೆ ಸುಮಾರಿಗೆ ರಾಂಬನ್ ಜಿಲ್ಲೆಯ ಶೆರ್ಬಿಬಿ ಬಳಿ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದ ಕಾರಣ, ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಟ್ರಕ್ ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಥಳೀಯ ಸ್ವಯಂಸೇವಕರು ಮತ್ತು ಪೊಲೀಸರು ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು, ಎಲ್ಲಾ ನಾಲ್ಕು ದೇಹಗಳನ್ನು ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಟ್ರಕ್ ಚಾಲಕ ಮೊಹಮ್ಮದ್ ಅಫ್ಜಲ್ ಗರೂ (42), ಕುಲ್ಗಾಮ್‌ನ ಅವರ ಸಹೋದರ ಅಲ್ತಾಫ್ ಗರೂ (36), ಇರ್ಫಾನ್ ಅಹ್ಮದ್ (33) ಮತ್ತು ಅನಂತನಾಗ್‌ನ ಅವರ ಸಹೋದರ ಶೋಕತ್ ಅಹ್ಮದ್ (29) ಎಂದು ಅಧಿಕಾರಿಗಳು ಗುರುತಿಸಿದ್ದಾರೆ. ಗೃಹ ಬಳಕೆಗಾಗಿ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ಸುಮಾರು ಆರು ಜಾನುವಾರುಗಳು ಸಹ ಅಪಘಾತದಲ್ಲಿ ಸಾವನ್ನಪ್ಪಿವೆ ಎಂದು ಅವರು ಹೇಳಿದರು.

ಭೂಕುಸಿತದಿಂದ ಕಾಶ್ಮೀರವನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ಸರ್ವಋತು ರಸ್ತೆಯಾದ ಹೆದ್ದಾರಿಯನ್ನು ನಿರ್ಬಂಧಿಸಲಾಗಿದ್ದು, ಅದನ್ನು ಸಂಚಾರಕ್ಕೆ ಯೋಗ್ಯವಾಗಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com