'ಸನಾತನ ಚರ್ಚೆ ಬಿಟ್ಟು ಕೇಂದ್ರದ ವೈಫಲ್ಯಗಳ ಬಗ್ಗೆ ಮಾತಾಡಿ: ಡಿಎಂಕೆ ನಾಯಕರಿಗೆ ಸಿಎಂ ಸ್ಟಾಲಿನ್ ಖಡಕ್ ಸೂಚನೆ

ಸನಾತನ ಧರ್ಮದ ಕುರಿತು ಡಿಎಂಕೆ ನಾಯಕ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವಂತೆಯೇ ಇತ್ತ ಎಚ್ಚೆತ್ತುಕೊಂಡಿರುವ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, 'ಸನಾತನ ಚರ್ಚೆ ಬಿಟ್ಟು ಕೇಂದ್ರದ ವೈಫಲ್ಯಗಳ ಬಗ್ಗೆ ಮಾತಾಡಿ ಎಂದು ಡಿಎಂಕೆ ನಾಯಕರಿಗೆ ಸೂಚನೆ ನೀಡಿದ್ದಾರೆ.
ಎಂಕೆ ಸ್ಟಾಲಿನ್
ಎಂಕೆ ಸ್ಟಾಲಿನ್
Updated on

ಚೆನ್ನೈ: ಸನಾತನ ಧರ್ಮದ ಕುರಿತು ಡಿಎಂಕೆ ನಾಯಕ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವಂತೆಯೇ ಇತ್ತ ಎಚ್ಚೆತ್ತುಕೊಂಡಿರುವ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, 'ಸನಾತನ ಚರ್ಚೆ ಬಿಟ್ಟು ಕೇಂದ್ರದ ವೈಫಲ್ಯಗಳ ಬಗ್ಗೆ ಮಾತಾಡಿ ಎಂದು ಡಿಎಂಕೆ ನಾಯಕರಿಗೆ ಸೂಚನೆ ನೀಡಿದ್ದಾರೆ.

ಡಿಎಂಕೆ ನಾಯಕರ ಸನಾತನ ಧರ್ಮ ವಿರೋಧಿ ಹೇಳಿಕೆಗಳು ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದ್ದು, ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ತುತ್ತಾಗುತ್ತಿವೆ. ಸ್ವತಃ ಡಿಎಂಕೆಯ ಮಿತ್ರಪಕ್ಷಗಳೇ ಆ ಪಕ್ಷದ ನಾಯಕ ಹೇಳಿಕೆಗಳಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಡಿಎಂಕೆ ಪಕ್ಷದ ತೀವ್ರ ಮುಜುಗರಕ್ಕೆ ಕಾರಣವಾಗುತ್ತಿದೆ. ಡಿಎಂಕೆಯ ಮೈತ್ರಿ ಪಕ್ಷ ಕಾಂಗ್ರೆಸ್ ಆ ಪಕ್ಷದ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದರೆ, ಇತ್ತ ಆಪ್ ಮತ್ತು ಶಿವಸೇನೆ ಹೇಳಿಕೆಯನ್ನು ಖಂಡಿಸಿವೆ. ಇದು ಡಿಎಂಕೆ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸುತ್ತಿದೆ.

ಏತನ್ಮದ್ಯೆ ಡಿಎಂಕೆ ಪಕ್ಷದ ಡ್ಯಾಮೇಜ್ ಕಂಟ್ರೋಲ್ ಮುಂದಾಗಿರುವ ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಸಿಎಂ ಎಂಕೆ ಸ್ಚಾಲಿನ್, ಸನಾತನ ಚರ್ಚೆ ಬಿಟ್ಟು ಕೇಂದ್ರದ ವೈಫಲ್ಯಗಳ ಬಗ್ಗೆ ಮಾತಾಡಿ ಎಂದು ಡಿಎಂಕೆ ನಾಯಕರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಸನಾತನ ಧರ್ಮದ ಚರ್ಚೆಯನ್ನು ತಪ್ಪಿಸಿ, ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರವನ್ನು "ಭ್ರಷ್ಟಾಚಾರ" ದ ಮೇಲೆ ಗುರಿಯಾಗಿಸಿಕೊಳ್ಳಬೇಕು.. ಸನಾತನ ಧರ್ಮವನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ದಿನಗಳ ಹಿಂದೆ ಹೇಳಿದ್ದು, ಅವರು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂಬುದಕ್ಕೆ ಸ್ಪಷ್ಟ ಸೂಚನೆಯಾಗಿದೆ ಎಂದು ತಮಿಳುನಾಡಿನ ಆಡಳಿತ ಪಕ್ಷದ ಮುಖ್ಯಸ್ಥರೂ ಆಗಿರುವ ಎಂಕೆ ಸ್ಟಾಲಿನ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸಚಿವರೊಬ್ಬರು ಉದ್ದೇಶಪೂರ್ವಕವಾಗಿ ಸನಾತನ ಧರ್ಮವನ್ನು ಮಾತನಾಡುವ ವಿಷಯವನ್ನಾಗಿ ಮಾಡುವ ಮೂಲಕ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರತಿದಿನ ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ತನ್ನ ವೈಫಲ್ಯಗಳನ್ನು ಮರೆಮಾಚುವ ತಂತ್ರಕ್ಕೆ ನಮ್ಮ ಜನರು ಬಲಿಯಾಗಬಾರದು. ದ್ರಾವಿಡರ್ ಕಳಗಂ ಮುಖ್ಯಸ್ಥ ಕೆ.ವೀರಮಣಿ ಅವರು ಭ್ರಷ್ಟಾಚಾರದ ಬಗ್ಗೆ ಚರ್ಚೆಯನ್ನು ತಡೆಯಲು ಬಿಜೆಪಿ ಬಯಸುತ್ತದೆ ಮತ್ತು ಆದ್ದರಿಂದ ಸನಾತನ ಧರ್ಮದ ಮೇಲೆ ಕೇಂದ್ರೀಕರಿಸುವ ಮೂಲಕ ಗಮನವನ್ನು ಬೇರೆಡೆಗೆ ಸೆಳೆಯುತ್ತಿದೆ ಎಂದು ಮುಖ್ಯಮಂತ್ರಿ ಸ್ಟಾಲಿನ್ ಹೇಳಿದರು.

"ನಾಸಿಕ, ಕೋಮುವಾದಿ ಮತ್ತು ನಿರಂಕುಶ ಬಿಜೆಪಿ ಆಡಳಿತವನ್ನು ಸೋಲಿಸುವ ಮೂಲಕ ದೇಶ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುವ ನಮ್ಮ ಪಾಲಿಸಬೇಕಾದ ಗುರಿಯನ್ನು ಗೆಲ್ಲಲು ನಾವು ಸಮರ್ಪಣಾ ಭಾವದಿಂದ ಕೆಲಸ ಮಾಡೋಣ ಮತ್ತು ಗಮನ ಬೇರೆಡೆಗೆ ಅವಕಾಶ ನೀಡದಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ಎಂದು ಸ್ಟಾಲಿನ್ ತನ್ನ ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳಿಗೆ ಸೂಚಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com