ರಕ್ಷಣಾ ಸಚಿವರನ್ನು ಭೇಟಿ ಮಾಡಿದ ಮೈತೇಯಿ ಸಮುದಾಯ; ಮಣಿಪುರದಿಂದ ಅಸ್ಸಾಂ ರೈಫಲ್ಸ್ ಹಿಂಪಡೆಯಲು ಒತ್ತಾಯ

ಇಂಫಾಲ್ ಕಣಿವೆ ಮೂಲದ ನಾಗರಿಕ ಸಮಾಜ ಸಂಘಟನೆಗಳ ಛತ್ರಿ ಸಂಸ್ಥೆಯಾದ COCOMIಯ ಪ್ರತಿನಿಧಿಗಳು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಅಸ್ಸಾಂ ರೈಫಲ್ಸ್ ಅನ್ನು ರಾಜ್ಯದಿಂದ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದರು ಮತ್ತು ಪಡೆ ಪಕ್ಷಪಾತದಿಂದ ವರ್ತಿಸುತ್ತಿದೆ ಎಂದು ಆರೋಪಿಸಿದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜನಾಥ್ ಸಿಂಗ್
Updated on

ಇಂಫಾಲ: ಇಂಫಾಲ್ ಕಣಿವೆ ಮೂಲದ ನಾಗರಿಕ ಸಮಾಜ ಸಂಘಟನೆಗಳ ಛತ್ರಿ ಸಂಸ್ಥೆಯಾದ COCOMIಯ ಪ್ರತಿನಿಧಿಗಳು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಅಸ್ಸಾಂ ರೈಫಲ್ಸ್ ಅನ್ನು ರಾಜ್ಯದಿಂದ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದರು ಮತ್ತು ಪಡೆ ಪಕ್ಷಪಾತದಿಂದ ವರ್ತಿಸುತ್ತಿದೆ ಎಂದು ಆರೋಪಿಸಿದರು.

ಮೈತೇಯಿ ಸಮುದಾಯವನ್ನು ಪ್ರತಿನಿಧಿಸುವ ಮಣಿಪುರ ಸಮಗ್ರತೆಯ ಸಮನ್ವಯ ಸಮಿತಿ (COCOMI), ತಮ್ಮ ಪ್ರತಿನಿಧಿಗಳು ಗುರುವಾರ ದೆಹಲಿಯ ಅವರ ನಿವಾಸದಲ್ಲಿ ಸಿಂಗ್ ಅವರನ್ನು ಭೇಟಿಯಾಗಿ, ಜ್ಞಾಪಕ ಪತ್ರವನ್ನು ಸಲ್ಲಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಮಣಿಪುರ ಬಿಕ್ಕಟ್ಟಿನ ವಿಚಾರವಾಗಿ ವಿಶ್ವಸಂಸ್ಥೆಯನ್ನು ಸಂಪರ್ಕಿಸುವ ಮೂಲಕ ಕುಕಿ ಸಮುದಾಯ ಸರ್ಕಾರಕ್ಕೆ ಮುಜುಗರ ಉಂಟುಮಾಡಿದೆ ಎಂದು ಅವರು ಮನವಿ ಪತ್ರದಲ್ಲಿ ಹೇಳಿದ್ದಾರೆ.

ಡ್ರಗ್ಸ್-ಭಯೋತ್ಪಾದನೆ, ಅಕ್ರಮ ವಲಸಿಗರು ಮತ್ತು ಅವರ ಗುರುತಿಸುವಿಕೆ ಮತ್ತು ಕಾರ್ಯಾಚರಣೆಯ ಒಪ್ಪಂದವನ್ನು ಅಮಾನತುಗೊಳಿಸುವ ವಿಷಯಗಳನ್ನು ರಾಜನಾಥ್ ಸಿಂಗ್ ಅವರೊಂದಿಗೆ ಪ್ರಸ್ತಾಪಿಸಿದ್ದಾಗಿ ಹೇಳಿಕೆ ತಿಳಿಸಿದೆ.

ಮತ್ತೊಂದೆಡೆ, ಕುಕಿ ಗುಂಪುಗಳು ರಾಜ್ಯ ಪೊಲೀಸರು ಪಕ್ಷಪಾತ ಧೋರಣೆಯನ್ನು ಅನುಸರಿಸುತ್ತಿವೆ ಎಂದು ಆರೋಪಿಸುತ್ತಿವೆ.
ಕಳೆದ ತಿಂಗಳು, ರಾಜ್ಯದ 10 ಕುಕಿ ಶಾಸಕರು ಅಸ್ಸಾಂ ರೈಫಲ್ಸ್ ಅನ್ನು ರಾಜ್ಯದಿಂದ ಹಿಂತೆಗೆದುಕೊಳ್ಳದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು. ಇದು ಬುಡಕಟ್ಟು ಜನಾಂಗದವರ ಭದ್ರತೆಗೆ ಅಪಾಯವನ್ನುಂಟುಮಾಡುತ್ತದೆ ಎಂದಿದ್ದರು.
ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಸುಮಾರು 175 ಜನರು ಸಾವಿಗೀಡಾಗಿದ್ದಾರೆ ಮತ್ತು 1,100 ಜನರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com