'ದೇಶದಲ್ಲಿ ತಕ್ಷಣವೇ ಜನಗಣತಿ ಆರಂಭಿಸಿ, ಮತ್ತಷ್ಟು ವಿಳಂಬವಾಗಬಾರದು': ಬಿಹಾರ ಸಿಎಂ

ದೇಶದಲ್ಲಿ ತಕ್ಷಣವೇ ಜನಗಣತಿ ಪ್ರಾರಂಭಿಸಬೇಕು ಮತ್ತು ಈ ಪ್ರಕ್ರಿಯೆ ಪ್ರಾರಂಭಿಸಲು ಯಾವುದೇ ವಿಳಂಬ ಮಾಡಬಾರದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಬಿಹಾರ ಸಿಎಂ ನಿತೀಶ್ ಕುಮಾರ್
ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ದೇಶದಲ್ಲಿ ತಕ್ಷಣವೇ ಜನಗಣತಿ ಪ್ರಾರಂಭಿಸಬೇಕು ಮತ್ತು ಈ ಪ್ರಕ್ರಿಯೆ ಪ್ರಾರಂಭಿಸಲು ಯಾವುದೇ ವಿಳಂಬ ಮಾಡಬಾರದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

2024 ರ ಲೋಕಸಭಾ ಚುನಾವಣೆಯ ನಂತರ ಜನಗಣತಿ ಪ್ರಾರಂಭವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಸಂಸತ್ತಿನಲ್ಲಿ ಹೇಳಿದ ಒಂದು ದಿನದ ನಂತರ ಅವರು ಬಿಹಾರ ಸಿಎಂ ಈ ಹೇಳಿಕೆ ನೀಡಿದ್ದಾರೆ.

“ದೇಶದಲ್ಲಿ ಜನಗಣತಿ 2021 ರಲ್ಲಿಯೇ ಪೂರ್ಣಗೊಳ್ಳಬೇಕಿತ್ತು. ಆದರೆ ಮೊದಲ ಬಾರಿಗೆ ವಿಳಂಬವಾಗಿದೆ. ಈಗ ಮತ್ತಷ್ಟು ವಿಳಂಬವಾಗಬಾರದು. 2024ರ ವರೆಗೆ ಏಕೆ ಕಾಯಬೇಕು? ಕೂಡಲೇ ಆರಂಭಿಸಬೇಕು' ಎಂದಿದ್ದಾರೆ.

2024ರ ಲೋಕಸಭಾ ಚುನಾವಣೆಯ ನಂತರ ಜನಗಣತಿ ಆರಂಭವಾಗಲಿದೆ ಎಂದು ಅಮಿತ್ ಶಾ ಅವರು ಬುಧವಾರ ಲೋಕಸಭೆಗೆ ತಿಳಿಸಿದ್ದಾರೆ. ಆದರೆ ಇನ್ನೂ ತಡ ಮಾಡದೆ ಗಣತಿ ಕಾರ್ಯವನ್ನು ಆರಂಭಿಸಬೇಕು ಎಂದು ನಿತೀಶ್ ಹೇಳಿದ್ದಾರೆ.

"ನಾವು ದೇಶದಲ್ಲಿ ಜನಗಣತಿಯೊಂದಿಗೆ ಜಾತಿ ಆಧಾರಿತ ಜನಗಣತಿಯನ್ನು ನಡೆಸಬೇಕೆಂದು ಒತ್ತಾಯಿಸಿದ್ದೇವೆ. ಆದರೆ ಕೇಂದ್ರ ಅದಕ್ಕೆ ಒಪ್ಪಲಿಲ್ಲ ಮತ್ತು ಅಂತಿಮವಾಗಿ ನಾವು ಜಾತಿ ಸಮೀಕ್ಷೆಯನ್ನು ನಾವೇ ಮಾಡಬೇಕಾಯಿತು" ಎಂದು ಬಿಹಾರ ಸಿಎಂ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com