'ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ': ಡ್ಯಾನಿಶ್ ಅಲಿ ಭೇಟಿಯಾದ ರಾಹುಲ್!

ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಸ್ಲಿಂ ಸಂಸದ, ಕುನ್ವರ್ ಡ್ಯಾನಿಶ್ ಅಲಿ ಅವರ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವಹೇಳನಕಾರಿ ಹೇಳಿಕೆ ನೀಡಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಸಂಜೆ ಅವರನ್ನು ಭೇಟಿಯಾದರು.
ಡ್ಯಾನಿಶ್ ಅಲಿ ಭೇಟಿಯಾದ ರಾಹುಲ್
ಡ್ಯಾನಿಶ್ ಅಲಿ ಭೇಟಿಯಾದ ರಾಹುಲ್
Updated on

ನವದೆಹಲಿ: ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಸ್ಲಿಂ ಸಂಸದ, ಕುನ್ವರ್ ಡ್ಯಾನಿಶ್ ಅಲಿ ಅವರ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವಹೇಳನಕಾರಿ ಹೇಳಿಕೆ ನೀಡಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಸಂಜೆ ಅವರನ್ನು ಭೇಟಿಯಾದರು.

ರಾಷ್ಟ್ರ ರಾಜಧಾನಿಯಲ್ಲಿರುವ ಡ್ಯಾನಿಶ್ ಅಲಿ ಅವರ ನಿವಾಸಕ್ಕೆ ಆಗಮಿಸಿದ ರಾಹುಲ್ ಗಾಂಧಿ, ಡ್ಯಾನಿಶ್ ಅಲಿ ಅವರನ್ನು ತಬ್ಬಿಕೊಳ್ಳುವ ಮೂಲಕ ಅವರಿಗೆ ಪ್ರೀತಿಯನ್ನು ತೋರಿಸಿದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ (ನಫ್ರತ್ ಕೆ ಬಜಾರ್ ಮೇ ಮೊಹಬ್ಬತ್ ಕಿ ದುಕಾನ್) ಎಂದು ಹೇಳಿದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್  ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಲೋಕಸಭೆಯಲ್ಲಿ ಬಿಜೆಪಿ ಸಂಸದ ರಮೇಶ್ ಬಿಧುರಿಯಿಂದ ಡ್ಯಾನಿಶ್ ಅಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಒಂದು ದಿನದ ನಂತರ ಈ ಸಭೆ ನಡೆದಿದೆ. ಡ್ಯಾನಿಶ್ ಅಲಿ ವಿರುದ್ಧ ರಮೇಶ್ ಬಿಧುರಿ ಅವರ ಆಕ್ಷೇಪಾರ್ಹ ಹೇಳಿಕೆಗಳು ವಿರೋಧ ಪಕ್ಷಗಳ ಕೋಪಕ್ಕೆ ಕಾರಣವಾಗಿದ್ದು, ಬಿಧುರಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿವೆ. ಸ್ಪೀಕರ್ ಈ ಬಗ್ಗೆ ವಿಚಾರಣೆ ನಡೆಸದಿದ್ದರೆ ಸಂಸತ್ತನ್ನು ತೊರೆಯುವುದಾಗಿ INDIA ಮೈತ್ರಿಕೂಟ ಎಚ್ಚರಿಕೆ ನೀಡಿದೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‌ಪಿ ನಾಯಕ, ದಕ್ಷಿಣ ದೆಹಲಿಯ ಬಿಜೆಪಿ ಸಂಸದ ಬಿಧುರಿ ಅವರು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡುವ ಮೂಲಕ ಇಡೀ ರಾಷ್ಟ್ರವನ್ನು ಅವಮಾನಿಸಿದ್ದಾರೆ. ರಮೇಶ್ ಬಿಧುರಿ ವಿರುದ್ಧ ಬಿಜೆಪಿ ಯಾವ ಕ್ರಮ ತೆಗೆದುಕೊಳ್ಳುತ್ತದೆಯೇ ಅಥವಾ ಅವರನ್ನು ಬಡ್ತಿ ನೀಡಿ ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸುತ್ತದೆಯೇ ಎಂಬುದು ಕಾದು ನೋಡಬೇಕಾದ ವಿಷಯವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com