ಮಾನನಷ್ಟ ಮೊಕದ್ದಮೆ: ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ಅಹಮದಾಬಾದ್ ಕೋರ್ಟ್ ಸಮನ್ಸ್

ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಕೆಲ ಗೊಂದಲಗಳಿಂದ ಮೊದಲ ಸಮನ್ಸ್ ನೀಡಲು ಸಾಧ್ಯವಾಗಿಲ್ಲ ಎಂದು ತಿಳಿದ ನಂತರ ಅಹಮದಾಬಾದ್‌ನ ಮೆಟ್ರೋಪಾಲಿಟನ್ ನ್ಯಾಯಾಲಯ ಶುಕ್ರವಾರ ಎರಡನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ.
ತೇಜಸ್ವಿ ಯಾದವ್
ತೇಜಸ್ವಿ ಯಾದವ್

ಅಹಮದಾಬಾದ್: ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಕೆಲ ಗೊಂದಲಗಳಿಂದ ಮೊದಲ ಸಮನ್ಸ್ ನೀಡಲು ಸಾಧ್ಯವಾಗಿಲ್ಲ ಎಂದು ತಿಳಿದ ನಂತರ ಅಹಮದಾಬಾದ್‌ನ ಮೆಟ್ರೋಪಾಲಿಟನ್ ನ್ಯಾಯಾಲಯ ಶುಕ್ರವಾರ ಎರಡನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ.

ಸಮನ್ಸ್‌ ಪ್ರಕಾರ, ಯಾದವ್ ಅವರು ಅಕ್ಟೋಬರ್ 13 ರಂದು ನ್ಯಾಯಾಲಯದ ಮುಂದೆ ಹಾಜರಾಗಬೇಕಾಗುತ್ತದೆ. ಗುಜರಾತಿಗಳು ಕಳ್ಳರು (ವಂಚಕರು) ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಅವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಆಗಸ್ಟ್ 28ರಂದು ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಡಿಜೆ ಪರ್ಮಾರ್ ಸಮನ್ಸ್ ಜಾರಿ ಮಾಡಿದ್ದರು.

ಐಪಿಸಿ ಸೆಕ್ಷನ್ 499 ಮತ್ತು 500 ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಸೆಪ್ಟೆಂಬರ್ 22 ರಂದು ವಿಚಾರಣೆಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಆರ್‌ಜೆಡಿ ಹಿರಿಯ ನಾಯಕನಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ನ್ಯಾಯಾಲಯವು ವಿಚಾರಣೆಯನ್ನು ಪ್ರಾರಂಭಿಸಿದಾಗ, ಸಮನ್ಸ್ ಇನ್ನೂ ನ್ಯಾಯಾಲಯದಲ್ಲಿದೆ ಮತ್ತು ಅದನ್ನು ಯಾದವ್‌ಗೆ ತಲುಪಿಸಿಲ್ಲ ಎಂಬುದು ತಿಳಿದುಬಂದಿದೆ. 

ದೂರುದಾರ ಹರೇಶ್ ಮೆಹ್ತಾ (69) ಅವರು ನ್ಯಾಯಾಲಯವೇ ತೇಜಸ್ವಿ ಯಾದವ್‌ಗೆ ಸಮನ್ಸ್ ಹಸ್ತಾಂತರಿಸುತ್ತದೆ ಎಂಬ ಭಾವನೆಯಲ್ಲಿದ್ದರೆ, ಮೆಹ್ತಾ ಅವರ ವಕೀಲರು ಸಮನ್ಸ್ ಅನ್ನು ಯಾದವ್‌ಗೆ ತಲುಪಿಸಿದ್ದಾರೆ ಎಂದು ನ್ಯಾಯಾಲಯ ಅಂದುಕೊಂಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com