ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧದ ದೂರು ಹಕ್ಕುಚ್ಯುತಿ ಸಮಿತಿಗೆ ರವಾನಿಸಿದ ಸ್ಪೀಕರ್

ಲೋಕಸಭೆಯಲ್ಲೇ ಬಿಎಸ್‌ಪಿ ಸಂಸದ ಡ್ಯಾನಿಶ್‌ ಅಲಿ ಅವರನ್ನು ಆಕ್ಷೇಪಾರ್ಹ ಪದ ಬಳಿಸಿ ನಿಂದಿಸಿದ್ದ ಬಿಜೆಪಿ ಸಂಸದ ರಮೇಶ್‌ ಬಿಧುರಿ ವಿರುದ್ಧದ ದೂರುಗಳನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಹಕ್ಕುಚ್ಯುತಿ ಸಮಿತಿಗೆ ಉಲ್ಲೇಖಿಸಿದ್ದಾರೆ...
ರಮೇಶ್ ಬಿಧುರಿ
ರಮೇಶ್ ಬಿಧುರಿ

ನವದೆಹಲಿ: ಲೋಕಸಭೆಯಲ್ಲೇ ಬಿಎಸ್‌ಪಿ ಸಂಸದ ಡ್ಯಾನಿಶ್‌ ಅಲಿ ಅವರನ್ನು ಆಕ್ಷೇಪಾರ್ಹ ಪದ ಬಳಿಸಿ ನಿಂದಿಸಿದ್ದ ಬಿಜೆಪಿ ಸಂಸದ ರಮೇಶ್‌ ಬಿಧುರಿ ವಿರುದ್ಧದ ದೂರುಗಳನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಹಕ್ಕುಚ್ಯುತಿ ಸಮಿತಿಗೆ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಅಲಿ ಮತ್ತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಡಿಎಂಕೆ ನಾಯಕಿ ಕನಿಮೋಳಿ ಸೇರಿದಂತೆ ಹಲವಾರು ವಿರೋಧ ಪಕ್ಷದ ಸಂಸದರು ಬಿಧುರಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರೆ, ನಿಶಿಕಾಂತ್ ದುಬೆಯಂತಹ ಹಲವು ಬಿಜೆಪಿ ಸಂಸದರು, ಬಿಎಸ್‌ಪಿ ಸಂಸದರೇ ಬಿಧುರಿ ಅವರು ಸದನದಲ್ಲಿ ಮಾತನಾಡುವಾಗ "ಪ್ರಚೋದನೆ" ನೀಡಿದ್ದಾರೆ. ಈ ಅಂಶವನ್ನು ಸಹ ಸ್ಪೀಕರ್ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸ್ಪೀಕರ್ ಓಂ ಬಿರ್ಲಾ ಅವರು ಈ ಎಲ್ಲಾ ದೂರುಗಳನ್ನು ಬಿಜೆಪಿ ಸಂಸದ ಸುನಿಲ್ ಕುಮಾರ್ ಸಿಂಗ್ ನೇತೃತ್ವದ ಹಕ್ಕುಚ್ಯುತಿ ಸಮಿತಿಗೆ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣವನ್ನು ಹಕ್ಕುಚ್ಯುತಿ ಸಮಿತಿಗೆ ಉಲ್ಲೇಖಿಸಿದ್ದಕ್ಕಾಗಿ ಸ್ಪೀಕರ್‌ಗೆ ಧನ್ಯವಾದ ಎಂದು ದುಬೆ ಅವರು ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com