30 ರೂಪಾಯಿಗೆ ಮೂವರ ನಡುವೆ ಜಗಳ, 17 ವರ್ಷದ ವಿದ್ಯಾರ್ಥಿಯ ಕೊಲೆ!

30 ರೂಪಾಯಿಗಾಗಿ ಮೂವರ ನಡುವೆ ಉಂಟಾದ ಜಗಳ 17 ವರ್ಷದ ವಿದ್ಯಾರ್ಥಿಯ ಹತ್ಯೆಯೊಂದಿಗೆ ಅಂತ್ಯವಾಗಿರುವ ಘಟನೆ ಉತ್ತರ ಪ್ರದೇಶದ  ಬಾಗ್ಪತ್ ಗ್ರಾಮದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಲಖನೌ: 30 ರೂಪಾಯಿಗಾಗಿ ಮೂವರ ನಡುವೆ ಉಂಟಾದ ಜಗಳ 17 ವರ್ಷದ ವಿದ್ಯಾರ್ಥಿಯ ಹತ್ಯೆಯೊಂದಿಗೆ ಅಂತ್ಯವಾಗಿರುವ ಘಟನೆ ಉತ್ತರ ಪ್ರದೇಶದ  ಬಾಗ್ಪತ್ ಗ್ರಾಮದಲ್ಲಿ ನಡೆದಿದೆ. ಬರೌತ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಗಳು 11 ನೇ ತರಗತಿ ವಿದ್ಯಾರ್ಥಿಯ ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತನನ್ನು ಕೆಎಚ್‌ಆರ್ ಇಂಟರ್ ಕಾಲೇಜಿನ ವಿದ್ಯಾರ್ಥಿ ಹೃತಿಕ್ ಎಂದು ಗುರುತಿಸಲಾಗಿದೆ. 30 ರೂಪಾಯಿಗೆ ಜಗಳ ಉಂಟಾಗಿ ಕೊಲೆಯಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಬರೌತ್ ಪೊಲೀಸ್ ಠಾಣಾಧಿಕಾರಿ ದೇವೇಶ್ ಕುಮಾರ್ ಸಿಂಗ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. 

30 ರೂಪಾಯಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಹೃತ್ತಿಕ್ ಅದೇ ಗ್ರಾಮದ ಮೂವರೊಂದಿಗೆ ಜಗಳವಾಡಿದ್ದು, ಆರೋಪಿಗಳು ಕತ್ತು ಹಿಸುಕಿ ಸಾಯಿಸಿದ್ದಾರೆ ಎಂದು ಕುಟುಂಬಸ್ಥರು ದೂರು ನೀಡಿದ್ದಾರೆ. 

ಆರೋಪಿಗಳು ಹೃತಿಕ್ ಗೆ ಪರಿಚಿತರಾಗಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com