ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಐಐಟಿ ಮದ್ರಾಸ್ ವಿದ್ಯಾರ್ಥಿ ಆತ್ಮಹತ್ಯೆ: ಈ ವರ್ಷದಲ್ಲಿ ಮೂರನೇ ಪ್ರಕರಣ

ಮದ್ರಾಸ್ ನ ಭಾರತೀಯ ತಂತ್ರಜ್ಞಾನ ಸಂಸ್ಥೆ -ಐಐಟಿಯ ಪಿಹೆಚ್ ಡಿ ವಿದ್ಯಾರ್ಥಿಯೊಬ್ಬ ತಮಿಳುನಾಡಿನ ವಲಚೇರಿಯಲ್ಲಿರುವ ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ.
Published on

ವಲಚೇರಿ: ಮದ್ರಾಸ್ ನ ಭಾರತೀಯ ತಂತ್ರಜ್ಞಾನ ಸಂಸ್ಥೆ -ಐಐಟಿಯ ಪಿಹೆಚ್ ಡಿ ವಿದ್ಯಾರ್ಥಿಯೊಬ್ಬ ತಮಿಳುನಾಡಿನ ವಲಚೇರಿಯಲ್ಲಿರುವ ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ.

ಪಶ್ಚಿಮ ಬಂಗಾಳದ 32 ವರ್ಷದ ವಿದ್ಯಾರ್ಥಿ ಮೃತಪಟ್ಟಿದ್ದು, ಈ ವರ್ಷದಲ್ಲಿ ಇದು ಐಐಟಿ ಮದ್ರಾಸ್ ನಲ್ಲಿ ಸಂಭವಿಸಿದ ಮೂರನೇ ಪ್ರಕರಣವಾಗಿದೆ. 2018ರಿಂದ ಒಟ್ಟು 11 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ.

'' ನನ್ನನ್ನು ಕ್ಷಮಿಸಿ, ಚೆನ್ನಾಗಿಲ್ಲ ಅಂತಾ ಮಾರ್ಚ್ 1 ರಂದು ಮೃತ ವಿದ್ಯಾರ್ಥಿ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ. ಈ ಸ್ಟೇಟಸ್ ನೋಡಿದ ಆತನ ಸ್ನೇಹಿತರು, ಆತನ ಮನೆಗೆ ಹೋದಾಗ, ಸಚಿನ್ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದ. ಈ ಸಂಬಂಧ ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ. 

ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ರಾಯಪೇಟೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.  ಈ ಸಾವಿನ ಕುರಿತು ಐಐಟಿ ಮದ್ರಾಸ್ ಸಂತಾಪ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com