2025ರಲ್ಲಿ ಬಿಹಾರದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ ಗಲಭೆಕೋರರನ್ನು ತಲೆಕೆಳಗಾಗಿ ಗಲ್ಲಿಗೇರಿಸಲಾಗುವುದು: ಅಮಿತ್ ಶಾ

ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಮಹಾಘಟಬಂಧನ್ ಸರ್ಕಾರವು ಸಸಾರಾಮ್ ಮತ್ತು ಬಿಹಾರ ಷರೀಫ್ ಪಟ್ಟಣಗಳಲ್ಲಿ ಕೋಮುಗಲಭೆಗಳನ್ನು ತಡೆಗಟ್ಟಲು ವಿಫಲವಾಗಿದೆ ಮತ್ತು 2025ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ ಗಲಭೆಕೋರರನ್ನು ತಲೆಕೆಳಗಾಗಿ ಗಲ್ಲಿಗೇರಿಸಲಾಗುವುದು ಎಂದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಪ್ರತಿಪಾದಿಸಿದರು.
ಅಮಿತ್ ಶಾ
ಅಮಿತ್ ಶಾ

ಹಿಸುವಾ: ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಮಹಾಘಟಬಂಧನ್ ಸರ್ಕಾರವು ಸಸಾರಾಮ್ ಮತ್ತು ಬಿಹಾರ ಷರೀಫ್ ಪಟ್ಟಣಗಳಲ್ಲಿ ಕೋಮುಗಲಭೆಗಳನ್ನು ತಡೆಗಟ್ಟಲು ವಿಫಲವಾಗಿದೆ ಮತ್ತು 2025ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ ಗಲಭೆಕೋರರನ್ನು ತಲೆಕೆಳಗಾಗಿ ಗಲ್ಲಿಗೇರಿಸಲಾಗುವುದು ಎಂದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಪ್ರತಿಪಾದಿಸಿದರು.

ನವಾಡಾ ಜಿಲ್ಲೆಯ ಹಿಸುವಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶಾ, 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲಾ 40 ಲೋಕಸಭಾ ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಬಿಹಾರದ ಜನರು ನಿರ್ಧರಿಸಿದ್ದಾರೆ ಎಂದರು.

ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಧಾನಿಯಾಗುತ್ತಾರೆ ಎಂದು ದೇಶದ ಜನರು ನಿರ್ಧರಿಸಿದ್ದಾರೆ. ಒಮ್ಮೆ ಅದು ಸಂಭವಿಸಿದಲ್ಲಿ, ನಿತೀಶ್ ಕುಮಾರ್ ಅವರು ತಮ್ಮ  ಡೆಪ್ಯುಟಿ ತೇಜಸ್ವಿ ಯಾದವ್‌ಗೆ ಅಧಿಕಾರವನ್ನು ಹಸ್ತಾಂತರಿಸುವ ಭರವಸೆಯಿಂದ ಹಿಂತಿರುಗುತ್ತಾರೆ. ಏಕೆಂದರೆ ,ಅವರ ಪ್ರಧಾನಿಯಾಗುವ ಕನಸುಗಳು ಭಗ್ನಗೊಳ್ಳುತ್ತವೆ ಎಂದು ಅವರು ಹೇಳಿದರು.

ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದರೆ, ಲಾಲು ಪ್ರಸಾದ್ ಮತ್ತು ನಿತೀಶ್ ಕುಮಾರ್ ಅವರು ಭಯೋತ್ಪಾದನೆ ಪ್ರವರ್ಧಮಾನಕ್ಕೆ ಸಹಾಯ ಮಾಡುವ ತುಷ್ಟೀಕರಣದ ರಾಜಕಾರಣ ಮಾಡಿದ್ದಾರೆ ಎಂದು ಶಾ ಆರೋಪಿಸಿದರು.

ಜಾತೀಯತೆಯ ವಿಷವನ್ನು ಹರಡುವ ನಿತೀಶ್ ಕುಮಾರ್ ಮತ್ತು ಜಂಗಲ್ ರಾಜ್ ಪ್ರವರ್ತಕ ಲಾಲು ಪ್ರಸಾದ್ ಅವರೊಂದಿಗೆ ಬಿಜೆಪಿ ಎಂದಿಗೂ ಕೈಜೋಡಿಸಲು ಸಾಧ್ಯವಿಲ್ಲ. ಬಿಹಾರ ಸಿಎಂಗಾಗಿ ಬಿಜೆಪಿಯ ಬಾಗಿಲು ಯಾವಾಗಲೂ ಮುಚ್ಚಿರುತ್ತದೆ ಎಂದು ಪುನರುಚ್ಚರಿಸಿದರು.

ಕಾಂಗ್ರೆಸ್, ಜೆಡಿಯು, ಆರ್‌ಜೆಡಿ, ಟಿಎಂಸಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವನ್ನು ವಿರೋಧಿಸಿದರೆ, ಒಂದು ಶುಭ ಮುಂಜಾನೆ ಮೋದಿ ಅಲ್ಲಿ ಆಕಾಶದೆತ್ತರದ ದೇವಾಲಯಕ್ಕೆ ಅಡಿಪಾಯ ಹಾಕಿದರು ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಕೋಮುಗಲಭೆ ಕುರಿತು ಅವರು, 'ಶೀಘ್ರದಲ್ಲಿ ಸಹಜ ಸ್ಥಿತಿ ಮರಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಬೆಳಗ್ಗೆ ರಾಜ್ಯಪಾಲರೊಂದಿಗೆ ಮಾತನಾಡಿದಾಗ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಲನ್ ಸಿಂಗ್ ಕೋಪಗೊಂಡರು ಮತ್ತು ಬಿಹಾರದ ಬಗ್ಗೆ ಯಾಕೆ ತಲೆ ಕೆಡಿಸಿಕೊಳ್ಳುತ್ತಿದ್ದೀರಿ ಎಂದು ಕೇಳಿದರು. ನಾನು ಕೇಂದ್ರ ಗೃಹ ಸಚಿವ ಮತ್ತು ಬಿಹಾರದ ಕಾನೂನು ಮತ್ತು ಸುವ್ಯವಸ್ಥೆ ನನ್ನ ಕಾಳಜಿಯೂ ಆಗಿದೆ' ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com