ಕೇರಳ: ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ವ್ಯಕ್ತಿ, ಮೂವರು ಸಾವು, ಎಂಟು ಮಂದಿಗೆ ಗಾಯ

ಎಕ್ಸ್‌ಪ್ರೆಸ್‌ ರೈಲಿನಲ್ಲಿ ವ್ಯಕ್ತಿಯೊಬ್ಬ ಜಗಳದ ನಂತರ ಸಹ-ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಮತ್ತು ಎಂಟು ಮಂದಿ ಗಾಯಗೊಂಡ ಗಂಟೆಗಳ ನಂತರ ಕೋಯಿಕ್ಕೋಡ್‌ನ ಎಲತ್ತೂರ್ ರೈಲು ನಿಲ್ದಾಣದ ಬಳಿ ಹಳಿಯಲ್ಲಿ ಮಹಿಳೆ ಮತ್ತು ಒಂದು ವರ್ಷದ ಮಗುವಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರೈಲಿನಲ್ಲಿದ್ದ ಪ್ರಯಾಣಿಕರಿಗೆ ಬೆಂಕಿ ಹಚ್ಚಿ ಬಳಿಕ ಶಂಕಿತ ವ್ಯಕ್ತಿ ಬಿಸಾಡಿದ ಬ್ಯಾಗ್‌ನಿಂದ ವಶಪಡಿಸಿಕೊಂಡ ವಸ್ತುಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ರೈಲಿನಲ್ಲಿದ್ದ ಪ್ರಯಾಣಿಕರಿಗೆ ಬೆಂಕಿ ಹಚ್ಚಿ ಬಳಿಕ ಶಂಕಿತ ವ್ಯಕ್ತಿ ಬಿಸಾಡಿದ ಬ್ಯಾಗ್‌ನಿಂದ ವಶಪಡಿಸಿಕೊಂಡ ವಸ್ತುಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
Updated on

ಕೋಯಿಕ್ಕೋಡ್: ಎಕ್ಸ್‌ಪ್ರೆಸ್‌ ರೈಲಿನಲ್ಲಿ ವ್ಯಕ್ತಿಯೊಬ್ಬ ಜಗಳದ ನಂತರ ಸಹ-ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಮತ್ತು ಎಂಟು ಮಂದಿ ಗಾಯಗೊಂಡ ಗಂಟೆಗಳ ನಂತರ ಕೋಯಿಕ್ಕೋಡ್‌ನ ಎಲತ್ತೂರ್ ರೈಲು ನಿಲ್ದಾಣದ ಬಳಿ ಹಳಿಯಲ್ಲಿ ಮಹಿಳೆ ಮತ್ತು ಒಂದು ವರ್ಷದ ಮಗುವಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕರು ತುರ್ತು ಸರಪಳಿಯನ್ನು ಎಳೆದ ನಂತರ ಆಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ನಿಧಾನವಾದಾಗ, ಆರೋಪಿ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ ಎಂದು ಅವರು ಹೇಳಿದರು.

ಮೂಲಗಳ ಪ್ರಕಾರ, ರಾತ್ರಿ 9.45 ರ ಸುಮಾರಿಗೆ ರೈಲು ಕೋಯಿಕ್ಕೋಡ್ ನಗರವನ್ನು ದಾಟಿ ಕೊರಪುಳ ರೈಲ್ವೆ ಸೇತುವೆಯನ್ನು ತಲುಪಿದಾಗ ಈ ಘಟನೆ ಸಂಭವಿಸಿದೆ. ರೈಲ್ವೆ ರಕ್ಷಣಾ ಪಡೆಗೆ (ಆರ್‌ಪಿಎಫ್) ಮಾಹಿತಿ ನೀಡಿದ ಪ್ರಯಾಣಿಕರು ಬೆಂಕಿಯನ್ನು ನಂದಿಸಿದ್ದಾರೆ.

ಪ್ರಾಥಮಿಕ ಮಾಹಿತಿಯಂತೆ ಬೆಂಕಿ ಹಚ್ಚಿದ ವ್ಯಕ್ತಿ ಘಟನೆ ಬಳಿಕ ಪರಾರಿಯಾಗಿದ್ದಾನೆ. ಸುಟ್ಟಗಾಯಗಳಾಗಿರುವ ಮೂವರನ್ನು ಆರ್‌ಪಿಎಫ್ ಆಸ್ಪತ್ರೆಗೆ ರವಾನಿಸಲಾಗಿದೆ ಮತ್ತು ಅಗತ್ಯ ತಪಾಸಣೆಯ ನಂತರ ರೈಲು ತನ್ನ ಪ್ರಯಾಣವನ್ನು ಮುಂದುವರೆಸಿದೆ ಎಂದು ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ, ಇಬ್ಬರ ನಡುವೆ ಶಂಕಿತ ವಾಗ್ವಾದದ ನಂತರ ಘಟನೆ ನಡೆದಿದೆ. ಕೋಯಿಕ್ಕೋಡ್ ನಗರ ಪೊಲೀಸರು ಮತ್ತು ರೈಲ್ವೆ ರಕ್ಷಣಾ ಪಡೆ ಈ ಬಗ್ಗೆ ತನಿಖೆ ಆರಂಭಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com