ಹಿರಿಯ ನಾಯಕರು ಪಕ್ಷ ತೊರೆಯಲು ರಾಹುಲ್ ಮುಖ್ಯ ಕಾರಣ; ಬೆನ್ನುಮೂಳೆಯಿಲ್ಲದವರು ಆ ಪಕ್ಷದಲ್ಲಿರಲು ಸಾಧ್ಯ: ಆಜಾದ್

ಇಂದು ನಾನು ಕಾಂಗ್ರೆಸ್‌ ಪಕ್ಷದಲ್ಲಿ ಇಲ್ಲದಿರುವುದಕ್ಕೆ ರಾಹುಲ್ ಗಾಂಧಿಯೇ ಮುಖ್ಯ ಕಾರಣ. ಹಳೆಯ ಪಕ್ಷದಲ್ಲಿ ಉಳಿಯಬೇಕೆಂದರೆ ಬೆನ್ನುಮೂಳೆ ಇರಬಾರದು ಎಂದು ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
ಗುಲಾಂ ನಬಿ ಆಜಾದ್
ಗುಲಾಂ ನಬಿ ಆಜಾದ್
Updated on

ನವದೆಹಲಿ: ಇಂದು ನಾನು ಕಾಂಗ್ರೆಸ್‌ ಪಕ್ಷದಲ್ಲಿ ಇಲ್ಲದಿರುವುದಕ್ಕೆ ರಾಹುಲ್ ಗಾಂಧಿಯೇ ಮುಖ್ಯ ಕಾರಣ. ಹಳೆಯ ಪಕ್ಷದಲ್ಲಿ ಉಳಿಯಬೇಕೆಂದರೆ ಬೆನ್ನುಮೂಳೆ ಇರಬಾರದು ಎಂದು ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ.

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅಥವಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಯಸಿದರೂ ಪಕ್ಷಕ್ಕೆ ಮರಳುವುದು ನನ್ನ ಕೈಯಲ್ಲಿಲ್ಲ ಎಂದರು. ಇಂದು ರಾಜಕೀಯದಲ್ಲಿ ಯಾರೂ 'ಅಸ್ಪೃಶ್ಯರಿಲ್ಲ. ಒಂದು ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಒಮ್ಮೆ ಚುನಾವಣೆ ನಡೆದರೆ ಅಲ್ಲಿ ಸರ್ಕಾರ ರಚಿಸುವ ಅವಕಾಶ ಉದ್ಭವವಾದರೆ, ಅಂತಹ ಸಂದರ್ಭದಲ್ಲಿ ಬಿಜೆಪಿ ಜೊತೆ ಹೋಗುವುದಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಆಜಾದ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಹತ್ತಿರವಿರುವವರು ಅವರ ವಿರೋಧಿಗಳು ಮತ್ತು ಅವರು ಮಾಡಿದ್ದಕ್ಕಾಗಿ ಇಂದು ಅವರಿಗೆ ಶಿಕ್ಷೆಯಾಗಿದೆ. 2013ರಲ್ಲಿ ಯುಪಿಎ ಸರ್ಕಾರ ತಂದ ಸುಗ್ರೀವಾಜ್ಞೆಯನ್ನು ಹರಿದು ಹಾಕದಿದ್ದರೆ ಇಂದು ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಲಾಗುತ್ತಿರಲಿಲ್ಲ ಎಂದು ಆಜಾದ್ ಹೇಳಿದ್ದಾರೆ.  

ವಾಸ್ತವವಾಗಿ, ತಮ್ಮ 'ಮೋದಿ ಉಪನಾಮ' ಹೇಳಿಕೆಗೆ ಕ್ಷಮೆಯಾಚಿಸಲು ರಾಹುಲ್ ಗಾಂಧಿ ನಿರಾಕರಿಸಿದ್ದರು. ಹೀಗಾಗಿ ಕಳೆದ ಮಾರ್ಚ್ 23ರಂದು ಸೂರತ್ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಹೆಚ್.ಹೆಚ್ ವರ್ಮಾ ಅವರ ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ಘೋಷಿಸಿತು. ಅಲ್ಲದೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಈ ತೀರ್ಪಿನ ವಿರುದ್ಧದ ಮೇಲ್ಮನವಿಗಾಗಿ ವಿಚಾರಣಾ ನ್ಯಾಯಾಲಯವು ಗಾಂಧಿಯವರ ಶಿಕ್ಷೆಯನ್ನು ಒಂದು ತಿಂಗಳ ಕಾಲ ಅಮಾನತುಗೊಳಿಸಿತು. ತೀರ್ಪಿನ ಒಂದು ದಿನದ ನಂತರ, ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು.

ಕಾಂಗ್ರೆಸ್ ಪಕ್ಷ ತನ್ನ ಹಿರಿಯ ನಾಯಕರ ಮಾತು ಕೇಳುವುದಿಲ್ಲ. 2014ರಲ್ಲಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಚುನಾವಣೆಯಲ್ಲಿ ಸೋಲುವುದು ನಿಶ್ಚಿತ ಎಂಬ ಭಾವನೆಯಿಂದ ಕಾಂಗ್ರೆಸ್ ಮನೆಯಲ್ಲಿಯೇ ಕುಳಿತಿತ್ತು ಎಂದು ಹೇಳಿದರು. 

ಲಂಡನ್ ನಲ್ಲಿ ಸಂದರ್ಶನದಲ್ಲಿ ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವದ ರಚನೆಯ ಮೇಲೆ 'ಅನಾಗರಿಕ ದಾಳಿ' ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದರು. ಈ ಹೇಳಿಕೆಯನ್ನು ಗುರಿಯಾಗಿಸಿದ ಆಜಾದ್, 'ಅವರು ಏನು ಹೇಳಬೇಕೋ ಅದನ್ನು ದೇಶದಲ್ಲಿ ಹೇಳಬೇಕು, ವಿದೇಶದಲ್ಲಿ ಅಲ್ಲ'. ವಿದೇಶಕ್ಕೆ ಹೋಗಿ ದೇಶದ ವಿರುದ್ಧ ಮಾತನಾಡಬಾರದಿತ್ತು ಎಂದು ಹೇಳಿದ್ದಾರೆ.

ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಕೂಡ ತಮ್ಮ ಆತ್ಮಚರಿತ್ರೆಯಲ್ಲಿ ಹಿಮಂತ ವಿಶ್ವ ಶರ್ಮಾ ಪ್ರಸಂಗವನ್ನು ಉಲ್ಲೇಖಿಸಿದ್ದಾರೆ. ಒಂದು ಕಾಲದಲ್ಲಿ ಅಸ್ಸಾಂನ ಪ್ರಮುಖ ಕಾಂಗ್ರೆಸ್ ನಾಯಕರಾಗಿದ್ದ ಹಿಮಂತ ವಿಶ್ವ ಶರ್ಮಾ ಅವರಿಗೆ ಬಹುಪಾಲು ಶಾಸಕರ ಬೆಂಬಲವಿದೆ. ಅಲ್ಲದೆ ಬಂಡಾಯವೆದ್ದು ಪಕ್ಷವನ್ನು ತೊರೆಯಲಿದ್ದಾರೆ ಎಂದು ರಾಹುಲ್ ಗಾಂಧಿಗೆ ಹೇಳಿಲಾಗಿತ್ತು. ಆದರೆ ಹಿಮಾಂತ ಪ್ರಕರಣವನ್ನು ರಾಹುಲ್ ಗಾಂಧಿ ಸರಿಯಾಗಿ ನಿಭಾಯಿಸಲಿಲ್ಲ, ಶರ್ಮಾ ಪಕ್ಷದಿಂದ ಹೊರನಡೆಯುವುದರಿಂದ ಆಗುವ ಹಾನಿಯ ಅರಿವಿದ್ದರೂ ಸೋನಿಯಾ ಗಾಂಧಿ ಅವರು ಪಕ್ಷದ ಅಧ್ಯಕ್ಷೆಯಾಗಿ ಮಧ್ಯಪ್ರವೇಶಿಸಲಿಲ್ಲ ಎಂದು ಅವರು ಹೇಳಿದರು.

ಹಿಮಂತ ಬಿಸ್ವಾ ಶರ್ಮಾ ವಿಷಯದಲ್ಲಿ ಏನನ್ನಾದರೂ ಮಾಡಿದ್ದರೆ 8 ರಾಜ್ಯಗಳು ಕಾಂಗ್ರೆಸ್ ಕೈಯಿಂದ ಹೋಗುತ್ತಿರಲಿಲ್ಲ. ಏನೇ ಆಗಲಿ, ಆಗಿದ್ದು ಆಗಿ ಹೋಗಿದೆ. ಹೋಗಲಿ 2024ರ ಚುನಾವಣೆಯಲ್ಲದರೂ ಗೆಲ್ಲುವಂತೆ ದೇವರು ಅವರಿಗೆ ಸ್ವಲ್ಪ ಜೀವ ತುಂಬಲಿ ಎಂಬುದು ರಾಹುಲ್ ಗಾಂಧಿಗೆ ಕಿವಿಮಾತು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com