ಮೋದಿ ಮೌನ ಪ್ರಶ್ನಿಸಿದ ಕಾಂಗ್ರೆಸ್: ಈಶಾನ್ಯ ರಾಜ್ಯಗಳ ವಿಷಯದಲ್ಲಿ ನೆಹರೂ ಮಾಡಿದ್ದೇನು: ನಿರ್ಮಲಾ ಸೀತಾರಾಮನ್

ಭಾರತ-ಚೀನಾ ಗಡಿಯಲ್ಲಿ ಚೀನಾದ ಕ್ರಮಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿದ್ದಕ್ಕಾಗಿ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್.
Nirmala Sitharaman
Nirmala Sitharaman

ಭಾರತ-ಚೀನಾ ಗಡಿಯಲ್ಲಿ ಚೀನಾದ ಕ್ರಮಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿದ್ದಕ್ಕಾಗಿ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು 1962ರಲ್ಲಿ ಇಡೀ ಈಶಾನ್ಯವನ್ನು ಅದರ ಅದೃಷ್ಟಕ್ಕೆ ಬಿಟ್ಟು ಕೈತೊಳೆದುಕೊಂಡಿದ್ದರು ಎಂದು ಸೀತಾರಾಮನ್ ಹೇಳಿದರು.

ನಾವು ಚೀನಿಯರು ಅರುಣಾಚಲ ಪ್ರದೇಶಕ್ಕೆ ಪ್ರವೇಶಿಸುವುದನ್ನು ನಿಲ್ಲಿಸಿದ್ದೇವೆ. ನಮ್ಮ ಕ್ರಮವು ಅದನ್ನು ತೋರಿಸುತ್ತದೆ. ಅದಕ್ಕಾಗಿಯೇ ಕಾಂಗ್ರೆಸ್ 'ಅಯ್ಯೋ, ಪ್ರಧಾನಿ ಮಾತನಾಡುವುದಿಲ್ಲ ಎಂದು ಹೇಳುತ್ತಿದ್ದಾರೆ. ರಾಹುಲ್ ಗಾಂಧಿ ನಮ್ಮ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಏನು ಹೇಳಿದ್ದರೆಂದು ಮೊದಲು ಪರಿಶೀಲಿಸಬೇಕೆಂದು ನಾನು ಬಯಸುತ್ತೇನೆ. ಅವರು ಈಶಾನ್ಯವನ್ನು ಕಳೆದುಕೊಂಡಿದ್ದರು ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನೀವು ಅರುಣಾಚಲ ಪ್ರದೇಶ ಮತ್ತು ಅಸ್ಸಾಂನ ಕೆಲವು ಭಾಗಗಳಿಗೆ ಹೋದರೆ, ಜನರು ಸ್ವತಃ ಹೇಳುತ್ತಾರೆ. ಅರುಣಾಚಲ ಪ್ರದೇಶದ ಜನರು ಈ ಪ್ರದೇಶದಲ್ಲಿ ಭಾರತದ ಪರವಾಗಿ ನಿಂತಿದ್ದು ಪ್ರತಿಯೊಬ್ಬ ಚೀನಿಯರು ಪಲಾಯನ ಮಾಡಬೇಕಾಯಿತು ಎಂದರು.

ಅರುಣಾಚಲ ಪ್ರದೇಶದ ಹಲವು ಸ್ಥಳಗಳ ಮರುನಾಮಕರಣಕ್ಕೆ ಚೀನಾ ಮಂಗಳವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ನೆರೆಯ ದೇಶಕ್ಕೆ ಮೋದಿ ನೀಡಿದ ಕ್ಲೀನ್ ಚಿಟ್ ಮತ್ತು ಗಡಿಯಲ್ಲಿ ಚೀನಾದ ಕ್ರಮಗಳ ಬಗ್ಗೆ ಅವರು ಮೌನವಾಗಿದ್ದಾರೆ ಎಂದು ಆರೋಪಿಸಿತ್ತು. ಇನ್ನು ಅರುಣಾಚಲ ಭಾರತದ ಅವಿಭಾಜ್ಯ ಅಂಗವಾಗಿದೆ ಮತ್ತು ಮರುನಾಮಕರಣದಿಂದ ಈ ವಾಸ್ತವವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಚೀನಾದ ಮರುನಾಮಕರಣದ ಕೆಲಸವನ್ನು ಭಾರತ ಸ್ಪಷ್ಟವಾಗಿ ತಿರಸ್ಕರಿಸಿದೆ.

ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರು ಚೀನಾದ ವಿಷಯದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಗಾಗ್ಗೆ ದಾಳಿ ಮಾಡುತ್ತಿರುತ್ತಾರೆ. ಚೀನಾಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರವೂ ಉತ್ತರ ನೀಡುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com