ಅರವಿಂದ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್‌ ವಿರೋಧಿಸಿ ಎಎಪಿ ಮುಖಂಡರು, ಕಾರ್ಯಕರ್ತರಿಂದ ದೆಹಲಿಯಾದ್ಯಂತ ಪ್ರತಿಭಟನೆ

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಕರೆಸಿಕೊಂಡ ಸಿಬಿಐ ವಿರುದ್ಧ ಆಮ್ ಆದ್ಮಿ ಪಕ್ಷ ಭಾನುವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ.
ಎಎಪಿ ನಾಯಕರು ಮತ್ತು ಕಾರ್ಯಕರ್ತರು ದೆಹಲಿಯ ಸಿಬಿಐ ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.
ಎಎಪಿ ನಾಯಕರು ಮತ್ತು ಕಾರ್ಯಕರ್ತರು ದೆಹಲಿಯ ಸಿಬಿಐ ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.
Updated on

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಕರೆಸಿಕೊಂಡ ಸಿಬಿಐ ವಿರುದ್ಧ ಆಮ್ ಆದ್ಮಿ ಪಕ್ಷ ಭಾನುವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ.

ಕೇಜ್ರಿವಾಲ್ ಅವರ ವಿಚಾರಣೆ ನಡೆಯುತ್ತಿದ್ದಂತೆ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ದೆಹಲಿ ಸಚಿವರಾದ ಸೌರಭ್ ಭಾರದ್ವಾಜ್, ಅತಿಶಿ ಮತ್ತು ಕೈಲಾಶ್ ಗೆಹ್ಲೋಟ್ ಮತ್ತು ರಾಜ್ಯಸಭಾ ಸಂಸದರಾದ ಸಂದೀಪ್ ಪಾಠಕ್, ರಾಘವ್ ಚಡ್ಡಾ ಮತ್ತು ಸಂಜಯ್ ಸಿಂಗ್ ಸೇರಿದಂತೆ ಪಕ್ಷದ ಉನ್ನತ ನಾಯಕರು ತನಿಖಾ ಸಂಸ್ಥೆಯ ಕೇಂದ್ರ ಕಚೇರಿ ಬಳಿ ಜಮಾಯಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಎಪಿ ದೆಹಲಿ ಸಂಚಾಲಕ ಗೋಪಾಲ್ ರೈ, ಸುಮಾರು 1,500 ಜನರನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಮುಖ್ಯಮಂತ್ರಿಗೆ ಸಿಬಿಐ ಸಮನ್ಸ್ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕಾಗಿ ರಾಷ್ಟ್ರ ರಾಜಧಾನಿಯಾದ್ಯಂತ ಹಲವಾರು ಶಾಸಕರು ಮತ್ತು ಕೌನ್ಸಿಲರ್‌ಗಳನ್ನು 'ಬಂಧಿಸಲಾಗಿದೆ' ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com