social_icon

ಬಿಲ್ಕಿಸ್ ಪ್ರಕರಣ: ಸುಪ್ರೀಂ ಕೋರ್ಟ್ ಆದೇಶದ ಮರುಪರಿಶೀಲನೆಗೆ ಮನವಿ ಮಾಡಲು ಕೇಂದ್ರ, ಗುಜರಾತ್ ಸರ್ಕಾರಗಳ ಚಿಂತನೆ 

ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಅಪರಾಧಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಾ.27 ರಂದು ನೀಡಿದ್ದ ಆದೇಶದ ಮರುಪರಿಶೀಲನೆಗೆ ಗುಜರಾತ್, ಕೇಂದ್ರ ಸರ್ಕಾರಗಳು ಚಿಂತನೆ ನಡೆಸಿವೆ.

Published: 18th April 2023 05:54 PM  |   Last Updated: 18th April 2023 07:19 PM   |  A+A-


Bilkis Bano

ಬಿಲ್ಕಿಸ್ ಬಾನೊ

Posted By : Srinivas Rao BV
Source : PTI

ನವದೆಹಲಿ: ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಅಪರಾಧಿಗಳಾಗಿದ್ದ 11 ಮಂದಿಯನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಾ.27 ರಂದು ನೀಡಿದ್ದ ಆದೇಶದ ಮರುಪರಿಶೀಲನೆಗೆ ಗುಜರಾತ್, ಕೇಂದ್ರ ಸರ್ಕಾರಗಳು ಚಿಂತನೆ ನಡೆಸಿವೆ.

ಈ ಸಂಬಂಧ ಏ.19 ರಂದು ಗುಜರಾತ್ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿಕೆ ನೀಡಿದ್ದು, ಸನ್ನಡತೆ ಅಧಾರದಲ್ಲಿ ಬಿಡುಗಡೆ ಮಾಡಿದ್ದಕ್ಕೆ ಸಂಬಂಧಿಸಿದ ಮೂಲ ಕಡತಗಳನ್ನು ಸಿದ್ಧವಾಗಿಟ್ಟುಕೊಂಡಿರುವಂತೆ ಸರ್ಕಾರಗಳಿಗೆ ಆದೇಶ ನೀಡಿತ್ತು.

ಅಪರಾಧಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಿರುವುದನ್ನು ನ್ಯಾ.ಕೆಎಂ ಜೋಸೆಫ್ ಹಾಗೂ ನ್ಯಾ. ಬಿವಿ ನಾಗರತ್ನ ಅವರಿದ್ದ ಪೀಠ ಪ್ರಶ್ನೆ ಮಾಡಿದ್ದು, ಅಪರಾಧದ ಗಂಭೀರತೆಯನ್ನು ಸರ್ಕಾರ ಪರಿಗಣಿಸಬೇಕಿತ್ತು ಎಂದು ಹೇಳಿತ್ತು.

ಇದನ್ನೂ ಓದಿ: ಅಪರಾಧಿಗಳಿಗೆ ಕ್ಷಮಾಪಣೆ: ಕಡತಗಳೊಂದಿಗೆ ಸಿದ್ಧರಾಗಿರಿ'; ಬಿಲ್ಕಿಸ್ ಬಾನೊ ಅರ್ಜಿ ಕುರಿತು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಾಕೀತು!

ಸನ್ನಡತೆ ಆಧಾರದಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡಲ್ಪು ಸರ್ಕಾರ ಬುದ್ಧಿ ಉಪಯೋಗಿಸಿದೆಯೇ? ಹಾಗೂ ಅದರ ನಿರ್ಧಾರಕ್ಕೆ ಯಾವ ಅಂಶ ಆಧಾರವಾಗಿದೆ ಎಂಬುದು ಪ್ರಶ್ನೆಯಾಗಿದೆ ಎಂದು ಕೋರ್ಟ್ ಹೇಳಿದ್ದು, 'ಇಂದು ಬಿಲ್ಕಿಸ್. ನಾಳೆ ಯಾರೇ ಆಗಬಹುದು. ಅದು ನೀವಾಗಿರಬಹುದು ಅಥವಾ ನಾವೇ ಆಗಿರಬಹುದು. ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಿರುವುದಕ್ಕೆ ಸೂಕ್ತ ಕಾರಣ ನೀವು ತೋರಿಸದಿದ್ದರೆ, ನಾವು ನಮ್ಮದೇ ಆದ ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಕೋರ್ಟ್ ಹೇಳಿದೆ.

ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳಿಗೆ ಕ್ಷಮಾಪಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಲೇವಾರಿ ಮಾಡಲು ವಿಚಾರಣೆಯನ್ನು ನ್ಯಾಯಾಲಯ ಮೇ 2 ರಂದು ನಿಗದಿಪಡಿಸಿದ್ದು, ಎಲ್ಲಾ ಅಪರಾಧಿಗಳಿಗೆ ತಮ್ಮ ಉತ್ತರಗಳನ್ನು ಸಲ್ಲಿಸುವಂತೆ ಕೇಳಿದೆ. ಇನ್ನು ಇದೇ ವೇಳೆ ಮರುಪರಿಶೀಲನೆ ಅರ್ಜಿ ಸಲ್ಲಿಸುವ ಬಗ್ಗೆ ನಿಲುವು ಸ್ಪಷ್ಟಪಡಿಸುವಂತೆ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಕೋರ್ಟ್ ಸೂಚಿಸಿದೆ.


Stay up to date on all the latest ದೇಶ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp