ಎನ್ ಸಿ ಪಿ ಸಭೆಗೆ ಮತ್ತೆ ಅಜಿತ್ ಪವಾರ್ ಗೈರು; ಮತ್ತೆ ಊಹಾಪೋಹ!

ಮಹಾರಾಷ್ಟ್ರದ ಎನ್ ಸಿಪಿ ನಾಯಕ ಅಜಿತ್ ಪವಾರ್ ಮತ್ತೆ ಎನ್ ಸಿಪಿ ಸಭೆಗೆ ಗೈರು ಹಾಜರಾಗಿದ್ದು, ಹಲವು ಊಹಾಪೋಹಗಳಿಗೆ ದಾರಿಮಾಡಿಕೊಟ್ಟಿದೆ. 
ಅಜಿತ್ ಪವಾರ್
ಅಜಿತ್ ಪವಾರ್

ಮುಂಬೈ: ಮಹಾರಾಷ್ಟ್ರದ ಎನ್ ಸಿಪಿ ನಾಯಕ ಅಜಿತ್ ಪವಾರ್ ಮತ್ತೆ ಎನ್ ಸಿಪಿ ಸಭೆಗೆ ಗೈರು ಹಾಜರಾಗಿದ್ದು, ಹಲವು ಊಹಾಪೋಹಗಳಿಗೆ ದಾರಿಮಾಡಿಕೊಟ್ಟಿದೆ. 

ಪೂರ್ವನಿಗದಿತ ಕಾರ್ಯಕ್ರಮಗಳಿಂದಾಗಿ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಅಜಿತ್ ಪವಾರ್ ಕಾರಣ ನೀಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಹುಬ್ಬೇರುವಂತೆ ಮಾಡಿದೆ.

ಪುಣೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿರುವ ಪವಾರ್, ಊಪಾಪೋಹಗಳಿಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದು, ಅದೇ ವೇಳೆಯಲ್ಲಿ ನಡೆಯುತ್ತಿರುವ ಮತ್ತೊಂದು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿರುವುದರಿಂದ ಎನ್ ಸಿಪಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಂತಹ ಸುದ್ದಿಗಳನ್ನು ಆನಂದಿಸಿ: ಎನ್ ಸಿಪಿ ಇಬ್ಭಾಗದ ಊಹಾಪೋಹಗಳ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್
 
ಇದೇ ವೇಳೆ ಎನ್ ಸಿಪಿ ಸಹ ಹೇಳಿಕೆ ನೀಡಿದ್ದು, ಅಜಿತ್ ಪವಾರ್ ಸಭೆಗೆ ಬರಲು ಸಾಧ್ಯವಾಗದೇ ಇರುವುದೆಂದರೆ, ಅವರು ಪಕ್ಷ ತೊರೆಯಲು ಯೋಚಿಸುತ್ತಿದ್ದಾರೆ ಎಂಬುದು ಅರ್ಥವಲ್ಲ ಎಂದು ಸಮರ್ಥಿಸಿಕೊಂಡಿದೆ. 

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸಂಜೆ ಮಹಾರಾಷ್ಟ್ರ ರಾಜ್ಯ ರಾಜಧಾನಿ ಮುಂಬೈ ನಲ್ಲಿ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಬೆಳಗ್ಗೆ ಪಕ್ಷದ ಸಭೆ ಆರಂಭವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com